‘ನಮ್ಮ ಕಾರ್ಯಕರ್ತರಾದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಎಂಬುವವರಿಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿಗೊಳಿಸಿದೆ. ಇವರ ಮೇಲೆ ಯಾವುದೇ ಕೊಲೆ ಅಥವಾ ಕೊಲೆಯತ್ನ ಪ್ರಕರಣಗಳು ಇಲ್ಲ. ಪೊಲೀಸರು ಕೋಮುದ್ವೇಷ ನಿಗ್ರಹ ಘಟಕದ ಕಾರ್ಯಚಟುವಟಿಕೆ ತೋರಿಸಲು ನಮ್ಮ ಕಾರ್ಯಕರ್ತರನ್ನು ಗುರಿ ಮಾಡುತ್ತಿದ್ದಾರೆ. ಬಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡುವ ಮೂಲಕ ಹಿಂದುತ್ವದ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಕಿಡಿಕಾರಿದ್ದಾರೆ.