ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತೀಯ ಗೂಂಡಾಗಿರಿ: ಮೂವರ ಬಂಧನ

Last Updated 28 ನವೆಂಬರ್ 2022, 7:21 IST
ಅಕ್ಷರ ಗಾತ್ರ

ಮಂಗಳೂರು: ನಗರದ ನಂತೂರಿನಲ್ಲಿ ಈಚೆಗೆ ನಡೆದ ಮತೀಯ ಗೂಂಡಾಗಿರಿ ಪ್ರಕರಣ ಸಂಬಂಧ ಕದ್ರಿ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಿಂದೂ ಯುವತಿ ಜೊತೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಯ್ಯದ್‌ ರಶೀಮ್‌ ಉಮರ್‌ ಅವರನ್ನು ಕೆಳಗಿಳಿಸಿದ ದುಷ್ಕರ್ಮಿಗಳ ತಂಡ ಅವರ ಮೇಲೆ ಗುರುವಾರ ಹಲ್ಲೆ ನಡೆಸಿತ್ತು.

’ಬಂಧಿತರನ್ನು ಅಸೈಗೋಳಿಯ ರಾಕೇಶ್‌, ಸುರತ್ಕಲ್‌ನ ಪ್ರಕಾಶ್‌ ಹಾಗೂ ಮುತ್ತುಎಂದು ಗುರುತಿಸಲಾಗಿದೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಹಲ್ಲೆ ನಡೆದ ಬಗ್ಗೆ ಸಯ್ಯದ್‌ ರಶೀಮ್‌ ಉಮರ್‌ ಅವರು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 323, 324, 504 ಹಾಗೂ 506ರ ಅಡಿ ಎಫ್‌ಐಆರ್‌ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT