<p><strong>ಮಂಗಳೂರು:</strong> ನಗರದ ಕಂಕನಾಡಿಯ ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ ಸಹೋದ್ಯೋಗಿ ಹಿಂದೂ ಯುವತಿಯ ಜೊತೆ ಸಲುಗೆಯಿಂದ ಇದ್ದಾನೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಮಂಗಳವಾರ ಸಂಜೆ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ವಿಷಯ ತಿಳಿದು ಕದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಘಟನೆ ಬಗ್ಗೆ ಮಳಿಗೆಯ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದರು.</p>.<p>‘ಕಂಕನಾಡಿಯಲ್ಲಿ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯ ಉದ್ಯೋಗಿ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ನಾವೂ ವಿಚಾರಣೆ ನಡೆಸುತ್ತಿದ್ದೇವೆ. ಘಟನೆ ಬಗ್ಗೆ ಇನ್ನೂ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ, ಹಲ್ಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ’ ಎಂದು ಕದ್ರಿ ಠಾಣೆಯ ಪೊಲೀಸರು ತಿಳಿಸಿದರು.</p>.<p>ಯುವಕನ ಮೇಲೆ ಹಲ್ಲೆ ನಡೆಸಿದ್ದನ್ನು ಬಜರಂಗ ದಳವು ನಿರಾಕರಿಸಿದೆ. ‘ಚಿನ್ನಾಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿ ಮತ್ತು ಸಹೋದ್ಯೋಗಿ ಮುಸ್ಲಿಂ ಯುವಕನನ್ನು ಪ್ರೀತಿಸಿರುವ ಬಗ್ಗೆ ಆಕೆಯ ತಂದೆ ತಾಯಿ ನಮ್ಮ ಸಂಘಟನೆಗೆ ದೂರು ನೀಡಿದ್ದರು. ನಮ್ಮ ಸಂಘಟನೆಯ ಕಾರ್ಯಕರ್ತರು ಆ ಯುವತಿಯ ತಂದೆ–ತಾಯಿ ಜೊತೆಗೆ ಮಳಿಗೆಗೆ ತೆರಳಿದ್ದರು. ಮುಸ್ಲಿಂ ಯುವಕನಿಗೆ ಬುದ್ಧಿವಾದ ಹೇಳುವಾಗ ಮಾತಿನ ಚಕಮಕಿ ನಡೆದಿದೆ’ ಎಂದು ಬಜರಂಗ ದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ತಿಳಿಸಿದರು. </p>.<p>ನಗರದ ನಂತೂರಿನಲ್ಲಿ ಇದೇ ಮಾದರಿಯ ಮತೀಯ ಗೂಂಡಾಗಿರಿ ಪ್ರಕರಣ ನ.24ರಂದು ನಡೆದಿತ್ತು. ಹಿಂದೂ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನನ್ನು ಕೆಳಗಿಳಿಸಿ ಆತನ ಮೇಲೆ ಸಂಘ ಪರಿವಾರದ ಸಂಘಟನೆಗೆ ಸೇರಿದ ಸದಸ್ಯರು ಹಲ್ಲೆ ನಡೆಸಿದ್ದರು. ಕದ್ರಿ ಠಾಣೆಯ ವ್ಯಾಪ್ತಿಯಲ್ಲೇ ನಡೆದ ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ನಗರದ ಕಂಕನಾಡಿಯ ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ ಸಹೋದ್ಯೋಗಿ ಹಿಂದೂ ಯುವತಿಯ ಜೊತೆ ಸಲುಗೆಯಿಂದ ಇದ್ದಾನೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಮಂಗಳವಾರ ಸಂಜೆ ಹಲ್ಲೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ವಿಷಯ ತಿಳಿದು ಕದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ, ಘಟನೆ ಬಗ್ಗೆ ಮಳಿಗೆಯ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದರು.</p>.<p>‘ಕಂಕನಾಡಿಯಲ್ಲಿ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯ ಉದ್ಯೋಗಿ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ನಾವೂ ವಿಚಾರಣೆ ನಡೆಸುತ್ತಿದ್ದೇವೆ. ಘಟನೆ ಬಗ್ಗೆ ಇನ್ನೂ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ, ಹಲ್ಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ’ ಎಂದು ಕದ್ರಿ ಠಾಣೆಯ ಪೊಲೀಸರು ತಿಳಿಸಿದರು.</p>.<p>ಯುವಕನ ಮೇಲೆ ಹಲ್ಲೆ ನಡೆಸಿದ್ದನ್ನು ಬಜರಂಗ ದಳವು ನಿರಾಕರಿಸಿದೆ. ‘ಚಿನ್ನಾಭರಣ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿ ಮತ್ತು ಸಹೋದ್ಯೋಗಿ ಮುಸ್ಲಿಂ ಯುವಕನನ್ನು ಪ್ರೀತಿಸಿರುವ ಬಗ್ಗೆ ಆಕೆಯ ತಂದೆ ತಾಯಿ ನಮ್ಮ ಸಂಘಟನೆಗೆ ದೂರು ನೀಡಿದ್ದರು. ನಮ್ಮ ಸಂಘಟನೆಯ ಕಾರ್ಯಕರ್ತರು ಆ ಯುವತಿಯ ತಂದೆ–ತಾಯಿ ಜೊತೆಗೆ ಮಳಿಗೆಗೆ ತೆರಳಿದ್ದರು. ಮುಸ್ಲಿಂ ಯುವಕನಿಗೆ ಬುದ್ಧಿವಾದ ಹೇಳುವಾಗ ಮಾತಿನ ಚಕಮಕಿ ನಡೆದಿದೆ’ ಎಂದು ಬಜರಂಗ ದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ತಿಳಿಸಿದರು. </p>.<p>ನಗರದ ನಂತೂರಿನಲ್ಲಿ ಇದೇ ಮಾದರಿಯ ಮತೀಯ ಗೂಂಡಾಗಿರಿ ಪ್ರಕರಣ ನ.24ರಂದು ನಡೆದಿತ್ತು. ಹಿಂದೂ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನನ್ನು ಕೆಳಗಿಳಿಸಿ ಆತನ ಮೇಲೆ ಸಂಘ ಪರಿವಾರದ ಸಂಘಟನೆಗೆ ಸೇರಿದ ಸದಸ್ಯರು ಹಲ್ಲೆ ನಡೆಸಿದ್ದರು. ಕದ್ರಿ ಠಾಣೆಯ ವ್ಯಾಪ್ತಿಯಲ್ಲೇ ನಡೆದ ಈ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>