‘ಕಂಕನಾಡಿಯಲ್ಲಿ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯ ಉದ್ಯೋಗಿ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ನಾವೂ ವಿಚಾರಣೆ ನಡೆಸುತ್ತಿದ್ದೇವೆ. ಘಟನೆ ಬಗ್ಗೆ ಇನ್ನೂ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ, ಹಲ್ಲೆ ನಡೆಸಿದವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ’ ಎಂದು ಕದ್ರಿ ಠಾಣೆಯ ಪೊಲೀಸರು ತಿಳಿಸಿದರು.