ಈ ಕುರಿತು ಸುದ್ದಿಗಾರರಿಗೆ ಇಲ್ಲಿ ಶನಿವಾರ ಮಾಹಿತಿ ನೀಡಿದ ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್. ಜೈನ್, ‘ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ವ್ಯಕ್ತಿಗಳನ್ನು ಗುರುತಿಸಿ ಅವರಿಂದ ಮುಚ್ಚಳಿಕೆ ಬರೆಸಿಕೊಳ್ಳುವ ಪರಿಪಾಠ ಹಿಂದಿನಿಂದಲೂ ಇದೆ. ಮತೀಯ ಗೂಂಡಾಗಿರಿ ನಡೆಸುವವರಿಂದಲೂ ಇದೇ ರೀತಿ ನಿರ್ದಿಷ್ಟ ಮೊತ್ತದ ಬಾಂಡ್ ಪಡೆದು, ಮುಚ್ಚಳಿಕೆ ಬರೆಸಿಕೊಳ್ಳಲಿದ್ದೇವೆ. ಮುಚ್ಚಳಿಕೆಯಲ್ಲಿ ನೀಡಿರುವ ವಾಗ್ದಾನದಂತೆ ಅವರು ನಡೆದುಕೊಳ್ಳದಿದ್ದರೆ, ಬಾಂಡ್ನ ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು, ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತೇವೆ’ ಎಂದು ತಿಳಿಸಿದರು.