ಬಂಟ್ವಾಳ: ಬೆಂಗಳೂರಿನಲ್ಲಿ ನಡೆದ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹ 1.50 ಕೋಟಿ ಅನುದಾನ ಒದಗಿಸಿದ್ದಾರೆ. ಇದೀಗ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ ನೀಡುತ್ತಿರುವ ಒಟ್ಟು ₹ 1 ಕೋಟಿ ಅನುದಾನದಲ್ಲಿ ಪ್ರತಿ ಕಂಬಳಕ್ಕೆ ತಲಾ ₹ 5 ಲಕ್ಷ ಅನುದಾನ ಸಿಗುತ್ತಿದೆ. ಈ ಅನುದಾನ ಹೆಚ್ಚಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ‘ಬಂಟ್ವಾಳ ಮೂಡೂರು-ಪಡೂರು ಕಂಬಳ’ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು.