ಮಂಗಳೂರು: ಶಾರ್ಜಾದಿಂದ ನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ₹1.09 ಕೋಟಿ ಮೌಲ್ಯದ 2.15 ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡಿನ ಫೈಜಲ್ ತೊಟ್ಟಿ ಮೆಲ್ಪರಂಬ ಹಾಗೂ ಮೊಹಮ್ಮದ್ ಶೋಹೈಬ್ ಮುಗು ಎಂಬುವವರು ಗುರುವಾರ ಏರ್ ಇಂಡಿಯಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಸಂಶಯದ ಮೇಲೆ ತಪಾಸಣೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 24 ಕ್ಯಾರೆಟ್ನ 2.154 ಕೆ.ಜಿ. ಚಿನ್ನವನ್ನು ಒಳ ಉಡುಪಿನಲ್ಲಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಕಸ್ಟಮ್ಸ್ ಉಪ ಆಯುಕ್ತ ಪ್ರವೀಣ ಕಂಡಿ, ಸೂಪರಿಂಟೆಂಡೆಂಟ್ ಶ್ರೀಕಾಂತ್ ಕೆ., ಶುಭೆಂದು ರಂಜನ್ ಬೆಹರೆ, ನವೀನ್ಕುಮಾರ್ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ. ತಂಡವನ್ನು ಕಸ್ಟಮ್ಸ್ ಆಯುಕ್ತ ಇಮಾಮುದ್ದೀನ್ ಅಹ್ಮದ್, ಜಂಟಿ ಆಯುಕ್ತ ಜೋನಸ್ ಜಾರ್ಜ್ ಅಭಿನಂದಿಸಿದ್ದಾರೆ.