ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ, ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಅಲ್ಲಿ ವಿಶೇಷ ಪೂಜೆ ನೆರವೇರಿಸಿದರು. ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು.