<p><strong>ಸುಬ್ರಹ್ಮಣ್ಯ: </strong>ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಮಲೆಕುಡಿಯ ಸಮುದಾಯದವರ ಮುಂದಾಳತ್ವದಲ್ಲಿ ಶುಕ್ರವಾರ ಮೊಸರು ಕುಡಿಕೆ ಉತ್ಸವ ನಡೆಯಿತು.</p>.<p>ಪೂರ್ವ ಶಿಷ್ಟ ಸಂಪ್ರದಾಯದಂತೆ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಮೊಸರು ಕುಡಿಕೆ ನಡೆಸುವ ಮೂಲಕ ಈ ಬಾರಿ ಸರಳವಾಗಿ ಆಚರಿಸಲಾಯಿತು.</p>.<p>ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ, ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಅಲ್ಲಿ ವಿಶೇಷ ಪೂಜೆ ನೆರವೇರಿಸಿದರು. ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು.</p>.<p>ಈ ನಡುವೆ ರಥಬೀದಿಯಿಂದ ಕಾಶಿಕಟ್ಟೆ ತನಕ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಟಮಿಯನ್ನು ಆಚರಿಸಿದರು. ಪಲ್ಲಕ್ಕಿಯನ್ನು ಮಲೆಕುಡಿಯ ಸಮುದಾಯದವರು ಹೊತ್ತುಕೊಂಡು ಸಾಗಿದರು. ನಂತರ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.</p>.<p>ಪುರೋಹಿತ ಸನತ್ ನೂರಿತ್ತಾಯ ಉತ್ಸವದ ವಿದಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ನಾಗೇಶ್ ಎ.ವಿ, ಮಲೆಕುಡಿಯ ಜನಾಂಗದ ಗುರಿಕಾರ ದಿನಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಬ್ರಹ್ಮಣ್ಯ: </strong>ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಮಲೆಕುಡಿಯ ಸಮುದಾಯದವರ ಮುಂದಾಳತ್ವದಲ್ಲಿ ಶುಕ್ರವಾರ ಮೊಸರು ಕುಡಿಕೆ ಉತ್ಸವ ನಡೆಯಿತು.</p>.<p>ಪೂರ್ವ ಶಿಷ್ಟ ಸಂಪ್ರದಾಯದಂತೆ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಮೊಸರು ಕುಡಿಕೆ ನಡೆಸುವ ಮೂಲಕ ಈ ಬಾರಿ ಸರಳವಾಗಿ ಆಚರಿಸಲಾಯಿತು.</p>.<p>ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು ಸ್ಥಳೀಯ ಮೂಲನಿವಾಸಿಗಳಾದ ಮಲೆಕುಡಿಯ ಜನಾಂಗದವರು ಪಾಲಕಿಯಲ್ಲಿ ಬಿರುದಾವಳಿ, ಮಂಗಳವಾದ್ಯದ ಮೂಲಕ ಮೆರವಣಿಗೆಯಲ್ಲಿ ದೇವಳಕ್ಕೆ ತಂದು ಅಲ್ಲಿ ವಿಶೇಷ ಪೂಜೆ ನೆರವೇರಿಸಿದರು. ದೇವಳಕ್ಕೆ ಪ್ರದಕ್ಷಿಣೆ ಬಂದು ದೇವಳದಿಂದ ಕಾಶಿಕಟ್ಟೆಗೆ ಉತ್ಸವವು ತೆರಳಿತು.</p>.<p>ಈ ನಡುವೆ ರಥಬೀದಿಯಿಂದ ಕಾಶಿಕಟ್ಟೆ ತನಕ ಅಲ್ಲಲ್ಲಿ ಕಂಬದಲ್ಲಿ ಕಟ್ಟಿದ್ದ ಮೊಸರು ತುಂಬಿದ ಕುಡಿಕೆಗಳನ್ನು ಮಹಿಳೆಯರು ಒಡೆದು ಜನ್ಮಾಷ್ಟಮಿಯನ್ನು ಆಚರಿಸಿದರು. ಪಲ್ಲಕ್ಕಿಯನ್ನು ಮಲೆಕುಡಿಯ ಸಮುದಾಯದವರು ಹೊತ್ತುಕೊಂಡು ಸಾಗಿದರು. ನಂತರ ಶ್ರೀಕೃಷ್ಣನಿಗೆ ಮಹಾಪೂಜೆ ನೆರವೇರಿತು.</p>.<p>ಪುರೋಹಿತ ಸನತ್ ನೂರಿತ್ತಾಯ ಉತ್ಸವದ ವಿದಿವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ನಾಗೇಶ್ ಎ.ವಿ, ಮಲೆಕುಡಿಯ ಜನಾಂಗದ ಗುರಿಕಾರ ದಿನಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>