ಮಂಗಳವಾರ ಸಂಜೆ 7.30 ರ ವೇಳೆಗೆ ಕೃಷ್ಣ ಭಟ್ (72) ಮೃತಪಟ್ಟಿದ್ದು, ಅವರ ತಾಯಿ ಲಕ್ಷ್ಮೀ ಅಮ್ಮ (92) ಬುಧವಾರ ಬೆಳಗ್ಗಿನ ಜಾವ 4 ಗಂಟೆಗೆ ನಿಧನರಾದರು. ಕೃಷ್ಣ ಭಟ್ ಎಂಡೋಸಲ್ಫಾನ್ ಪೀಡಿತರು ಮತ್ತು ಬುದ್ಧಿಮಾಂದ್ಯರಾಗಿದ್ದರು. ಅವಿವಾಹಿತರಾಗಿದ್ದ ಅವರನ್ನು ಸಹೋದರರೇ ಸಲಹುತ್ತಿದ್ದರು. ಮಂಗಳವಾರ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಿ ಬಳಿಕ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆತರುವ ದಾರಿ ಮಧ್ಯೆಯೇ ಅಸುನೀಗಿದ್ದರು.