<p><strong>ಪುತ್ತೂರು</strong>: ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಉಂಟಾಗಿ ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ನಿವಾಸಿಯಾದ ಬಾಣಂತಿ ಮೃತಪಟ್ಟಿದ್ದು, ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂರು ಅಳಿಕೆ ನಿವಾಸಿ ಮೊಹಮ್ಮದ್ ಬಶೀರ್ ಕೆ.ಎಂ.ಅವರ ಪತ್ನಿ ಆಯಿಷತ್ ಸೌಜಾನ (26) ಮೃತಪಟ್ಟವರು.</p>.<p>ಮೊಹಮ್ಮದ್ ಬಶೀರ್ ಅವರ ಪತ್ನಿ ಆಯಿಷತ್ ಸೌಜಾನ ಅವರನ್ನು ಎರಡನೇ ಹೆರಿಗೆಗಾಗಿ ಕಾಸರಗೋಡಿನ ಸರ್ಕಾರಿ ಆಸ್ಪತ್ರೆಗೆ ಜೂನ್ 27ರಂದು ದಾಖಲಿಸಿದ್ದರು. ಜುಲೈ 1ರಂದು ಮುಂಜಾನೆ ಆಯಿಷತ್ ಸೌಜಾನ ಅವರು ಸಾಮಾನ್ಯ ಹೆರಿಗೆಯ ಮೂಲಕ ಗಂಡು ಶಿಶುವಿಗೆ ಜನ್ಮ ನೀಡಿದ್ದರು. ಆ ಬಳಿಕ ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಕಾಸರಗೋಡು ಸರ್ಕಾರಿ ಆಸ್ಪತ್ರೆಯ ವೈದ್ಯರ ಸಲಹೆಯ ಮೇರೆಗೆ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಆಯಿಷತ್ ಸೌಜಾನ ಅವರು ಚಿಕಿತ್ಸೆಗೆ ಸ್ಪಂದಿಸದೆ ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.</p>.<p>ಆಯಿಷತ್ ಸೌಜಾನ ಅವರ ಸಹೋದರ ಸುಳ್ಯ ತಾಲ್ಲೂಕಿನ ಜಾಲ್ಸೂರಿನ ಸಣ್ಣಕದಿಕೆ ನಿವಾಸಿ ಶಿಹಾಬುದ್ದೀನ್ ಅವರು ನೀಡಿರುವ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಶು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಉಂಟಾಗಿ ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ನಿವಾಸಿಯಾದ ಬಾಣಂತಿ ಮೃತಪಟ್ಟಿದ್ದು, ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನೆಟ್ಟಣಿಗೆ ಮುಡ್ನೂರು ಗ್ರಾಮದ ಕನೂರು ಅಳಿಕೆ ನಿವಾಸಿ ಮೊಹಮ್ಮದ್ ಬಶೀರ್ ಕೆ.ಎಂ.ಅವರ ಪತ್ನಿ ಆಯಿಷತ್ ಸೌಜಾನ (26) ಮೃತಪಟ್ಟವರು.</p>.<p>ಮೊಹಮ್ಮದ್ ಬಶೀರ್ ಅವರ ಪತ್ನಿ ಆಯಿಷತ್ ಸೌಜಾನ ಅವರನ್ನು ಎರಡನೇ ಹೆರಿಗೆಗಾಗಿ ಕಾಸರಗೋಡಿನ ಸರ್ಕಾರಿ ಆಸ್ಪತ್ರೆಗೆ ಜೂನ್ 27ರಂದು ದಾಖಲಿಸಿದ್ದರು. ಜುಲೈ 1ರಂದು ಮುಂಜಾನೆ ಆಯಿಷತ್ ಸೌಜಾನ ಅವರು ಸಾಮಾನ್ಯ ಹೆರಿಗೆಯ ಮೂಲಕ ಗಂಡು ಶಿಶುವಿಗೆ ಜನ್ಮ ನೀಡಿದ್ದರು. ಆ ಬಳಿಕ ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನಲೆಯಲ್ಲಿ ಕಾಸರಗೋಡು ಸರ್ಕಾರಿ ಆಸ್ಪತ್ರೆಯ ವೈದ್ಯರ ಸಲಹೆಯ ಮೇರೆಗೆ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಆಯಿಷತ್ ಸೌಜಾನ ಅವರು ಚಿಕಿತ್ಸೆಗೆ ಸ್ಪಂದಿಸದೆ ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.</p>.<p>ಆಯಿಷತ್ ಸೌಜಾನ ಅವರ ಸಹೋದರ ಸುಳ್ಯ ತಾಲ್ಲೂಕಿನ ಜಾಲ್ಸೂರಿನ ಸಣ್ಣಕದಿಕೆ ನಿವಾಸಿ ಶಿಹಾಬುದ್ದೀನ್ ಅವರು ನೀಡಿರುವ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಶು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>