ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿ ಎನ್ನುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲವೂ ಅವ್ಯವಹಾರವಾಗಿಯೇ ಕಾಣುತ್ತದೆ. ದೇಶ ಹಾಗೂ ದೇಶದ ಜನರ ಬಗ್ಗೆ ಕಾಳಜಿ ಇದ್ದರೆ, ಕೊರೊನಾ ವೈರಸ್ ಹರಡುವಿಕೆ ತಡೆಯಲು ಒಟ್ಟಾಗಿ ಹೋರಾಡಬೇಕಿತ್ತು. ಅದನ್ನು ಬಿಟ್ಟು ವಲಸೆ ಕಾರ್ಮಿಕರನ್ನು ಎತ್ತಿ ಕಟ್ಟುವುದು, ಜನರನ್ನು ಬೀದಿಗೆ ಇಳಿಸುವ ಮೂಲಕ ನೀಚ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಹೇಳಿದ್ದಾರೆ.