ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜ: ಸಂಸದರಿಂದ ಸಾಂತ್ವನ

Last Updated 15 ಆಗಸ್ಟ್ 2022, 3:57 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಇಲ್ಲಿನ ಪರ್ವತಮುಖಿ ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಪಂಜದ ಕರಿಮಜಲು ನಿವಾಸಕ್ಕೆ ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶನಿವಾರ ಭೇಟಿ ನೀಡಿ, ಸಾಂತ್ವನ ಹೇಳಿದರು.

ಬಳಿಕ ವೈಯಕ್ತಿಕ ಧನ ಸಹಾಯ ನೀಡಿದರು. ಈ ವೇಳೆ ಪಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ದೇರಾಜೆ, ಪ್ರಮುಖರಾದ ಜಗದೀಶ್ ಅಧಿಕಾರಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎಸ್.ಎನ್. ಮನ್ಮಥ ಇದ್ದರು.

ಸಂಸದ, ಸಚಿವರ ಭೇಟಿ ಅತಿವೃಷ್ಟಿ ಯಿಂದ ಹಾನಿಗೆ ಒಳಗಾದ ಸುಳ್ಯ ತಾಲ್ಲಾಕಿನ ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವ ಎಸ್. ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗೆ ನಲುಗಿದ ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬೆಂಡೋಡಿ, ಹರಿಹರೇಶ್ವರ ದೇವಸ್ಥಾನ ಮತ್ತಿತರರ ಪ್ರದೇಶಗಳಿಗೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದರು.

ಹರಿಹರ ಪಲ್ಲತಡ್ಕ ಗ್ರಾಮ ಪಂಚಾ
ಯಿತಿ ಅಧ್ಯಕ್ಷ ಜಯಂತ ಬಾಳುಗೋಡು, ಮುಖಂಡರಾದ ಎ.ವಿ. ತೀರ್ಥರಾಮ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ, ವಿಜಯ ಅಂಙಣ, ಕಿಶೋರ್ ಕುಮಾರ್ ಕೂಜುಗೋಡು, ರಾಧಾಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT