ಸುಬ್ರಹ್ಮಣ್ಯ: ಇಲ್ಲಿನ ಪರ್ವತಮುಖಿ ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟ ಪಂಜದ ಕರಿಮಜಲು ನಿವಾಸಕ್ಕೆ ಸಂಸದ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶನಿವಾರ ಭೇಟಿ ನೀಡಿ, ಸಾಂತ್ವನ ಹೇಳಿದರು.
ಬಳಿಕ ವೈಯಕ್ತಿಕ ಧನ ಸಹಾಯ ನೀಡಿದರು. ಈ ವೇಳೆ ಪಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮಾ ದೇರಾಜೆ, ಪ್ರಮುಖರಾದ ಜಗದೀಶ್ ಅಧಿಕಾರಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎಸ್.ಎನ್. ಮನ್ಮಥ ಇದ್ದರು.
ಸಂಸದ, ಸಚಿವರ ಭೇಟಿ ಅತಿವೃಷ್ಟಿ ಯಿಂದ ಹಾನಿಗೆ ಒಳಗಾದ ಸುಳ್ಯ ತಾಲ್ಲಾಕಿನ ಹರಿಹರ ಪಲ್ಲತ್ತಡ್ಕ ಹಾಗೂ ಕೊಲ್ಲಮೊಗ್ರು ಗ್ರಾಮಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವ ಎಸ್. ಅಂಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗೆ ನಲುಗಿದ ಹರಿಹರ ಪಲ್ಲತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬೆಂಡೋಡಿ, ಹರಿಹರೇಶ್ವರ ದೇವಸ್ಥಾನ ಮತ್ತಿತರರ ಪ್ರದೇಶಗಳಿಗೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬಿದರು.
ಹರಿಹರ ಪಲ್ಲತಡ್ಕ ಗ್ರಾಮ ಪಂಚಾ ಯಿತಿ ಅಧ್ಯಕ್ಷ ಜಯಂತ ಬಾಳುಗೋಡು, ಮುಖಂಡರಾದ ಎ.ವಿ. ತೀರ್ಥರಾಮ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ವೆಂಕಟ್ ದಂಬೆಕೋಡಿ, ವಿಜಯ ಅಂಙಣ, ಕಿಶೋರ್ ಕುಮಾರ್ ಕೂಜುಗೋಡು, ರಾಧಾಕೃಷ್ಣ ಇದ್ದರು.