ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ನಬ್ ಮೇಲೆ ದಾಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ

Last Updated 23 ಏಪ್ರಿಲ್ 2020, 7:32 IST
ಅಕ್ಷರ ಗಾತ್ರ

ಮಂಗಳೂರು: ಪತ್ರಕರ್ತ ಅರ್ನಬ್‌ ಗೋಸ್ವಾಮಿ ಮತ್ತು ಅವರ ಪತ್ನಿಯ ಮೇಲಿನ ದಾಳಿ ಖಂಡಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ , ಸಂಸದ ನಳಿನ್ ಕುಮಾರ್, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ ಎಂದು ಹೇಳಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಸಂಸದ ನಳಿನ್, 'ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಾಕ್ ಸ್ವಾತಂತ್ರ್ಯ ಕಾಂಗ್ರೆಸ್‌ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿ, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ' ಎಂದು ಹೇಳಿದ್ದಾರೆ.

ರಾತ್ರಿ 10 ಗಂಟೆಗೆ ಕೆಲಸಮುಗಿಸಿ ಕಾರಿನಲ್ಲಿ ಮನೆಗೆ ವಾಪಸಾಗುತ್ತಿದ್ದಅರ್ನಬ್‌ ಗೋಸ್ವಾಮಿ ಮತ್ತು ಅವರ ಪತ್ನಿ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT