ರಾಜ್ಯದಲ್ಲಿಯೇ ಪ್ರಥಮವಾಗಿ ಬೆಂಗಳೂರಿನ ಗ್ರಾಮೀಣ ಭಾಗದ ಜಿಗಣಿಯಲ್ಲಿ ಒಣ ಕಸ ಪ್ಲಾಸ್ಟಿಕ್, ರಟ್ಟು, ಗಾಜಿನ ಬಾಟಲ್ ಮತ್ತಿತರ ವಸ್ತುಗಳ ಮರು ಉತ್ಪಾದನೆ ಮಾಡುವುದರಿಂದ ಒಣ ತ್ಯಾಜ್ಯದಿಂದ ಆರ್ಥಿಕ ಲಾಭ ಆಗಿದೆ ಎಂದರು. ಪೈಲೆಟ್ ಕಾರ್ಯಕ್ರಮವಾಗಿ ರಾಮನಗರ, ಉಡುಪಿ, ಬಳ್ಳಾರಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಂ.ಆರ್.ಎಫ್. ಘಟಕಗಳನ್ನು ಸ್ಥಾಪನೆಗೆ ಮಂಜೂರಾತಿ ನೀಡಲಾಗಿದೆ. ಜಿಲ್ಲೆಯಲ್ಲಿ ಶೀಘ್ರ ಈ ಕಾರ್ಯವನ್ನು ಪ್ರಾರಂಭಿಸಬೇಕು ಎಂದು ತಿಳಿಸಿದರು.