ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೊಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ತನ್ನ ವಾರ್ಷಿಕೋತ್ಸವ ಮುನ್ನಾ ದಿನವಾದ ಶುಕ್ರವಾರ ವೆನ್ಲಾಕ್ ಆಸ್ಪತ್ರೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 115ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.
ರಿಫೈನರಿ ನಿರ್ದೇಶಕ ಸಂಜಯ್ ವರ್ಮಾ, ವಿಜಿಲೆನ್ಸ್ ಅಧಿಕಾರಿ ಗಣೇಶ್ ಎಸ್. ಭಟ್, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ. ಸೆಲ್ವಿ ಇದ್ದರು. ಎಂಆರ್ಪಿಎಲ್ನ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರು ರಕ್ತದಾನ ಮಾಡಿದರು.