<p><strong>ಮಂಗಳೂರು:</strong> ಮಂಗಳೂರು ರಿಫೈನರ್ ಆ್ಯಂಡ್ ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನ ಆಚರಿಸಲಾಯಿತು.</p>.<p>ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ತಜ್ಞ ವೈದ್ಯ ಡಾ. ನಟೇಶ್ ಬಿ.ಎಚ್ ಮಾತನಾಡಿ, ಡಾ. ಅಂಬೇಡ್ಕರ್ ಅವರು ಸಮಾನತೆ, ಭ್ರಾತೃತ್ವದ ಸಂದೇಶ ಸಾರಿದವರು. ಅವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಶ್ಯಾಮಪ್ರಸಾದ್ ಕಾಮತ್, ರಾಷ್ಟ್ರ ನಿರ್ಮಾಣಕ್ಕೆ ಅಂಬೇಡ್ಕರ್ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.</p>.<p>ಕೊರಗ ಸಮುದಾಯದ ಪ್ರಥಮ ಮಹಿಳಾ ಪಿ.ಎಚ್ಡಿ ಪದವೀಧರೆಯಾಗಿರುವ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸಬಿತಾ ಕೊರಗ ಮತ್ತು ಮಂಗಳೂರು ವಿ.ವಿ ಪ್ರಾಧ್ಯಾಪಕ ದಿನಕರ ಅವರನ್ನು ಸನ್ಮಾನಿಸಲಾಯಿತು.</p>.<p>ರಿಫೈನರಿ ನಿರ್ದೇಶಕ ನಂದಕುಮಾರ್ ಪಿಳ್ಳೈ, ಹಣಕಾಸು ವಿಭಾಗದ ನಿರ್ದೇಶಕ ದೇವೇಂದ್ರ ಕುಮಾರ್, ಅಧಿಕಾರಿಗಳಾದ ಬಿಎಚ್ವಿ ಪ್ರಸಾದ್, ಬಿ. ಸುದರ್ಶನ್ ಹಾಜರಿದ್ದರು. ಸಂದೇಶ್ ಜೆ. ಕುಟಿನ್ಹೊ ಸ್ವಾಗತಿಸಿದರು. ಮನೋಜ್ ಕುಮಾರ್ ವಂದಿಸಿದರು. ಎಂಆರ್ಪಿಎಲ್ ಸಿಬ್ಬಂದಿ ‘ಜೈ ಭೀಮ್’ ಕಿರುನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರು ರಿಫೈನರ್ ಆ್ಯಂಡ್ ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್) ಕಚೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನ ಆಚರಿಸಲಾಯಿತು.</p>.<p>ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ತಜ್ಞ ವೈದ್ಯ ಡಾ. ನಟೇಶ್ ಬಿ.ಎಚ್ ಮಾತನಾಡಿ, ಡಾ. ಅಂಬೇಡ್ಕರ್ ಅವರು ಸಮಾನತೆ, ಭ್ರಾತೃತ್ವದ ಸಂದೇಶ ಸಾರಿದವರು. ಅವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಆರ್ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ಶ್ಯಾಮಪ್ರಸಾದ್ ಕಾಮತ್, ರಾಷ್ಟ್ರ ನಿರ್ಮಾಣಕ್ಕೆ ಅಂಬೇಡ್ಕರ್ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು.</p>.<p>ಕೊರಗ ಸಮುದಾಯದ ಪ್ರಥಮ ಮಹಿಳಾ ಪಿ.ಎಚ್ಡಿ ಪದವೀಧರೆಯಾಗಿರುವ ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಸಬಿತಾ ಕೊರಗ ಮತ್ತು ಮಂಗಳೂರು ವಿ.ವಿ ಪ್ರಾಧ್ಯಾಪಕ ದಿನಕರ ಅವರನ್ನು ಸನ್ಮಾನಿಸಲಾಯಿತು.</p>.<p>ರಿಫೈನರಿ ನಿರ್ದೇಶಕ ನಂದಕುಮಾರ್ ಪಿಳ್ಳೈ, ಹಣಕಾಸು ವಿಭಾಗದ ನಿರ್ದೇಶಕ ದೇವೇಂದ್ರ ಕುಮಾರ್, ಅಧಿಕಾರಿಗಳಾದ ಬಿಎಚ್ವಿ ಪ್ರಸಾದ್, ಬಿ. ಸುದರ್ಶನ್ ಹಾಜರಿದ್ದರು. ಸಂದೇಶ್ ಜೆ. ಕುಟಿನ್ಹೊ ಸ್ವಾಗತಿಸಿದರು. ಮನೋಜ್ ಕುಮಾರ್ ವಂದಿಸಿದರು. ಎಂಆರ್ಪಿಎಲ್ ಸಿಬ್ಬಂದಿ ‘ಜೈ ಭೀಮ್’ ಕಿರುನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>