ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುಪರ್ದಿಗೆ ಬರುವ ಈ ಸೇತುವೆಯ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ಮಾಡಿದ ರಂಧ್ರಗಳು ಮಣ್ಣು, ಕಸದಿಂದ ಮುಚ್ಚಿಕೊಂಡಿದ್ದು, ಧಾರಾಕಾರ ಮಳೆ ಬಂದಾಗ ರಸ್ತೆಯಲ್ಲಿ ನೀರು ನಿಲ್ಲುತ್ತಿದ್ದು, ವಾಹನಗಳು ಸೇತುವೆಯ ಮೇಲೆ ಸಂಚರಿಸುವಾಗ ಈ ಕೆಸರು ನೀರು ಪಾದಚಾರಿಗಳ ಮೇಲೆ, ದ್ವಿಚಕ್ರ ವಾಹನ ಸವಾರರ ಮೇಲೆ ಸಿಂಪಡಣೆಯಾಗುತ್ತಿದೆ.