ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ನ ಪ್ರಾಯೋಜಕತ್ವದ 2018ರ ಸಾಲಿನ ಪ್ರಶಸ್ತಿಯನ್ನು ಸಂಘದ ಸ್ಥಾಪಕಾಧ್ಯಕ್ಷ ಡಾ. ನಾ.ಮೊಗಸಾಲೆ ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಒಟ್ಟು 68 ಹಸ್ತಪ್ರತಿಗಳು ಬಂದಿದ್ದು, ಸುಬ್ರಾಯ ಚೊಕ್ಕಾಡಿ , ಡಾ. ಬಸವರಾಜ ಕಲ್ಗುಡಿ, ಡಾ. ನೆಲ್ಲಿಕಟ್ಟೆ ಎಸ್. ಸಿದ್ಧೇಶ್ ಅವರು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಯನ್ನು ನಿರ್ಣಯಿಸಲಾಗಿದೆ.