ತೋಡಾರಿನ ಹಿದಾಯತ್ ನಗರದ ಪೆರಾಡಿ ಕಂಪೌಂಡ್ನ ಅಬುಸಾಲಿ ಎಂಬುವರ ಮನೆ ಹತ್ತಿರದ ಗುಡ್ಡದಲ್ಲಿ ಹಂಡೇಲಿನ ಹಸನ್ ಬಾವಾ ಎಂಬುವರು 12 ಹೋರಿ ಮತ್ತು 2 ಕೋಣಗಳನ್ನು ಅಕ್ರಮವಾಗಿ ಕಟ್ಟಿ ಹಾಕಿದ್ದರು. ಅವುಗಳನ್ನು ಕಸಾಯಿ ಖಾನೆಗೆ ಮಾರಾಟ ಮಾಡುವ ಉದ್ದೇಶ ಇತ್ತು ಎನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿಯ ಆಧಾರದಲ್ಲಿ ಮೂಡುಬಿದಿರೆ ಇನ್ಸ್ಪೆಕ್ಟರ್ ನಿತ್ಯಾನಂದ ಪಂಡಿತ್ ಮತ್ತು ಸಿಬ್ಬಂದಿ ದಾಳಿ ನಡೆಸಿ ಹಸುಗಳನ್ನು ರಕ್ಷಣೆ ಮಾಡಿ ಕೆಂಜಾರಿನ ಗೋಶಾಲೆಗೆ ಹಸ್ತಾಂತರಿಸಿದ್ದಾರೆ.