<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ಮುಡಿಪು - ಮಂಗಳೂರು ಸ್ಟೇಟ್ ಬ್ಯಾಂಕ್ ನಡುವೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ನಿದ್ದೆ ಹೋಗಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನಿರ್ವಾಹಕನನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಬಾಗಲಕೋಟೆ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35) ಈ ಕೃತ್ಯವೆಸಗಿದ ಆರೋಪಿ.</p>.<p>ಕೆಎಸ್ಆರ್ಟಿಸಿಯು ಪ್ರದೀಪ್ನನ್ನು ಸೇವೆಯಿಂದ ಅಮಾನತುಗೊಳಿಸಿದೆ.</p>.<p>ನಿರ್ವಾಹಕ ಪ್ರದೀಪ್ ಕೆಎಸ್ಆರ್ಟಿಸಿ ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏ. 22ರಂದು ಯುವತಿಯ ತೋಳ ಸಂದಿಯಲ್ಲಿ ಕೈತೂರಿ ಲೈಂಗಿಕ ಕಿರುಕುಳ ನೀಡಿದ್ದ. ದೃಶ್ಯವನ್ನು ಬಸ್ನ ಪ್ರಯಾಣಿಕರರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.</p>.<p>‘ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ಮಾನಭಂಗ ಯತ್ನ) ಹಾಗೂ ಸೆಕ್ಷನ್ 75ರ (ಮಹಿಳೆಗೆ ಲೈಂಗಿಕ ಕಿರುಕುಳ) ಅಡಿ ಎಫ್ಐಆರ್ ದಾಖಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.</p>.<p>ನಿರ್ವಾಹಕನ ವಜಾಕ್ಕೆ ಸಚಿವ ಸೂಚನೆ: ಕೆಎಸ್ಆರ್ಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ನಿರ್ವಾಹಕ ಕೆಟ್ಟದಾಗಿ ನಡೆದುಕೊಂಡಿರುವ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು. ಆರೋಪಿ ನಿರ್ವಾಹಕನನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೆಎಸ್ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.</p>.<p>‘ಕೆಎಸ್ಆರ್ಟಿಸಿ ಬಸ್ ಚಾಲಕರು, ನಿರ್ವಾಹಕರ ಬಗ್ಗೆ ಪ್ರಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಯ ಗೌರವಕ್ಕೆ ಧಕ್ಕೆ ತರುತ್ತವೆ. ಬಸ್ನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ಮುಡಿಪು - ಮಂಗಳೂರು ಸ್ಟೇಟ್ ಬ್ಯಾಂಕ್ ನಡುವೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ನಿದ್ದೆ ಹೋಗಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ನಿರ್ವಾಹಕನನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.</p>.<p>ಬಾಗಲಕೋಟೆ ಮೂಲದ ಪ್ರದೀಪ್ ಕಾಶಪ್ಪ ನಾಯ್ಕರ್ (35) ಈ ಕೃತ್ಯವೆಸಗಿದ ಆರೋಪಿ.</p>.<p>ಕೆಎಸ್ಆರ್ಟಿಸಿಯು ಪ್ರದೀಪ್ನನ್ನು ಸೇವೆಯಿಂದ ಅಮಾನತುಗೊಳಿಸಿದೆ.</p>.<p>ನಿರ್ವಾಹಕ ಪ್ರದೀಪ್ ಕೆಎಸ್ಆರ್ಟಿಸಿ ಬಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏ. 22ರಂದು ಯುವತಿಯ ತೋಳ ಸಂದಿಯಲ್ಲಿ ಕೈತೂರಿ ಲೈಂಗಿಕ ಕಿರುಕುಳ ನೀಡಿದ್ದ. ದೃಶ್ಯವನ್ನು ಬಸ್ನ ಪ್ರಯಾಣಿಕರರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.</p>.<p>‘ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ಮಾನಭಂಗ ಯತ್ನ) ಹಾಗೂ ಸೆಕ್ಷನ್ 75ರ (ಮಹಿಳೆಗೆ ಲೈಂಗಿಕ ಕಿರುಕುಳ) ಅಡಿ ಎಫ್ಐಆರ್ ದಾಖಲಾಗಿದೆ’ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.</p>.<p>ನಿರ್ವಾಹಕನ ವಜಾಕ್ಕೆ ಸಚಿವ ಸೂಚನೆ: ಕೆಎಸ್ಆರ್ಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ನಿರ್ವಾಹಕ ಕೆಟ್ಟದಾಗಿ ನಡೆದುಕೊಂಡಿರುವ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಮುಗಿಸಬೇಕು. ಆರೋಪಿ ನಿರ್ವಾಹಕನನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೆಎಸ್ಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದಾರೆ.</p>.<p>‘ಕೆಎಸ್ಆರ್ಟಿಸಿ ಬಸ್ ಚಾಲಕರು, ನಿರ್ವಾಹಕರ ಬಗ್ಗೆ ಪ್ರಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಯ ಗೌರವಕ್ಕೆ ಧಕ್ಕೆ ತರುತ್ತವೆ. ಬಸ್ನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>