<p><strong>ಮೂಲ್ಕಿ:</strong> ಬೈಕ್ ಕಳವು ಪ್ರಕರಣದ ಆರೋಪಿಗಳನ್ನು ಮೂಲ್ಕಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕಳುವಾಗಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್ಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.</p>.<p>ಸುರತ್ಕಲ್ ಮುಕ್ಕದ ಮೊಹಮ್ಮದ್ ರಾಝಿಕ್ (36 ವರ್ಷ), ಬೈಕಂಪಾಡಿ ಅಂಗರಗುಂಡಿಯ ಉಬೈದತ್ ಹೈದರ್ (31) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>2026ರ ಮೇ 18ರಂದು ಮೂಲ್ಕಿ ಜಂಕ್ಷನ್ ಬಳಿಯ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ ಹೋಂಡಾ ಯುನಿಕಾರ್ನ್ ಬೈಕ್ ಕಳವಾಗಿತ್ತು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಆರೋಪಿ ಮೊಹಮ್ಮದ್ ರಾಝಿಕ್ ವಿರುದ್ಧ ಸುರತ್ಕಲ್ ಠಾಣೆ, ಪಣಂಬೂರು ಠಾಣೆ ಹಾಗೂ ಮೂಲ್ಕಿ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಆರೋಪಿ ಉಬೈದತ್ ಹೈದರ್ ವಿರುದ್ಧ ಅಕ್ರಮ ಕೂಟ ರಚಿಸಿ, ಮಾರಕಾಸ್ತ್ರ ಹಿಡಿದು ಗಲಭೆ ನಡೆಸಿದ್ದೂ ಸೇರಿದಂತೆ ವಿವಿಧ ಆರೋಪಗಳಡಿ ಪಣಂಬೂರು ಠಾಣೆಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ಈ ಹಿಂದೆ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-29-1679701643</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ:</strong> ಬೈಕ್ ಕಳವು ಪ್ರಕರಣದ ಆರೋಪಿಗಳನ್ನು ಮೂಲ್ಕಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕಳುವಾಗಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್ಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ.</p>.<p>ಸುರತ್ಕಲ್ ಮುಕ್ಕದ ಮೊಹಮ್ಮದ್ ರಾಝಿಕ್ (36 ವರ್ಷ), ಬೈಕಂಪಾಡಿ ಅಂಗರಗುಂಡಿಯ ಉಬೈದತ್ ಹೈದರ್ (31) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.</p>.<p>2026ರ ಮೇ 18ರಂದು ಮೂಲ್ಕಿ ಜಂಕ್ಷನ್ ಬಳಿಯ ಅಪೋಲೊ ಫಾರ್ಮಾ ಹತ್ತಿರ ನಿಲ್ಲಿಸಿದ ಹೋಂಡಾ ಯುನಿಕಾರ್ನ್ ಬೈಕ್ ಕಳವಾಗಿತ್ತು. ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಆರೋಪಿ ಮೊಹಮ್ಮದ್ ರಾಝಿಕ್ ವಿರುದ್ಧ ಸುರತ್ಕಲ್ ಠಾಣೆ, ಪಣಂಬೂರು ಠಾಣೆ ಹಾಗೂ ಮೂಲ್ಕಿ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಆರೋಪಿ ಉಬೈದತ್ ಹೈದರ್ ವಿರುದ್ಧ ಅಕ್ರಮ ಕೂಟ ರಚಿಸಿ, ಮಾರಕಾಸ್ತ್ರ ಹಿಡಿದು ಗಲಭೆ ನಡೆಸಿದ್ದೂ ಸೇರಿದಂತೆ ವಿವಿಧ ಆರೋಪಗಳಡಿ ಪಣಂಬೂರು ಠಾಣೆಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ಈ ಹಿಂದೆ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-29-1679701643</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>