<p><strong>ಮೂಲ್ಕಿ:</strong> ಬುಧವಾರ ಮನೆಯಿಂದ ಆಟೊದಲ್ಲಿ ತೆರಳಿದ್ದ ಮೂಲ್ಕಿ ಕೊಲ್ನಾಡು ಬಳಿಯ ನಿವಾಸಿ ಮಹಮ್ಮದ್ ಷರೀಫ್ (52) ನಾಪತ್ತೆಯಾಗಿದ್ದು, ಅವರು ಗುರುವಾರ ಸಂಜೆ ಕೇರಳ ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಹಲವು ಸಂಶಯಗಳು ವ್ಯಕ್ತವಾಗಿದೆ.</p>.<p>ಮಹಮ್ಮದ್ ಷರೀಫ್ ಅವರು ದಿನಂಪ್ರತಿ ಕೊಟ್ಟಾರದ ಆಟೊ ನಿಲ್ದಾಣದಲ್ಲಿ ಬಾಡಿಗೆ ನಡೆಸುತ್ತಿದ್ದರು. ಬುಧವಾರ ರಾತ್ರಿಯಾದರೂ ಬಾರದೆ ಇದ್ದುದರಿಂದ ಗುರುವಾರ ಬೆಳಿಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಸಾಮಾಜಿಕ ಮಾಧ್ಯಮದಲ್ಲಿ ನಾಪತ್ತೆಯ ಬಗ್ಗೆ ತಿಳಿಸಲಾಗಿತ್ತು.</p>.<p>ಮೂಲ್ಕಿ ಪೊಲೀಸರಿಗೆ ಲಭಿಸಿದ ಮಾಹಿತಿ ಆಧರಿಸಿ ಕುಂಜತ್ತೂರಿಗೆ ತೆರಳಿದಾಗ ಅಲ್ಲಿ ರಿಕ್ಷಾ ಪತ್ತೆಯಾಗಿದ್ದು, ಹತ್ತಿರದ ಬಾವಿಯಲ್ಲಿ ಶವ ಪತ್ತೆಯಾಗಿದೆ.</p>.<p>ಬಾಡಿಗೆ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿರುವ ಸಾಧ್ಯತೆ ಇದೆ. ಕುಂಜತ್ತೂರು ಪ್ರದೇಶವು ಮಾದಕ ವ್ಯಸನಿಗಳ ತಾಣವಾಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೊಹಮ್ಮದ್ ಷರೀಫ್ ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ:</strong> ಬುಧವಾರ ಮನೆಯಿಂದ ಆಟೊದಲ್ಲಿ ತೆರಳಿದ್ದ ಮೂಲ್ಕಿ ಕೊಲ್ನಾಡು ಬಳಿಯ ನಿವಾಸಿ ಮಹಮ್ಮದ್ ಷರೀಫ್ (52) ನಾಪತ್ತೆಯಾಗಿದ್ದು, ಅವರು ಗುರುವಾರ ಸಂಜೆ ಕೇರಳ ಗಡಿಭಾಗದ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿನ ಹಲವು ಸಂಶಯಗಳು ವ್ಯಕ್ತವಾಗಿದೆ.</p>.<p>ಮಹಮ್ಮದ್ ಷರೀಫ್ ಅವರು ದಿನಂಪ್ರತಿ ಕೊಟ್ಟಾರದ ಆಟೊ ನಿಲ್ದಾಣದಲ್ಲಿ ಬಾಡಿಗೆ ನಡೆಸುತ್ತಿದ್ದರು. ಬುಧವಾರ ರಾತ್ರಿಯಾದರೂ ಬಾರದೆ ಇದ್ದುದರಿಂದ ಗುರುವಾರ ಬೆಳಿಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಸಾಮಾಜಿಕ ಮಾಧ್ಯಮದಲ್ಲಿ ನಾಪತ್ತೆಯ ಬಗ್ಗೆ ತಿಳಿಸಲಾಗಿತ್ತು.</p>.<p>ಮೂಲ್ಕಿ ಪೊಲೀಸರಿಗೆ ಲಭಿಸಿದ ಮಾಹಿತಿ ಆಧರಿಸಿ ಕುಂಜತ್ತೂರಿಗೆ ತೆರಳಿದಾಗ ಅಲ್ಲಿ ರಿಕ್ಷಾ ಪತ್ತೆಯಾಗಿದ್ದು, ಹತ್ತಿರದ ಬಾವಿಯಲ್ಲಿ ಶವ ಪತ್ತೆಯಾಗಿದೆ.</p>.<p>ಬಾಡಿಗೆ ನೆಪದಲ್ಲಿ ಕರೆದೊಯ್ದು ಕೊಲೆ ಮಾಡಿರುವ ಸಾಧ್ಯತೆ ಇದೆ. ಕುಂಜತ್ತೂರು ಪ್ರದೇಶವು ಮಾದಕ ವ್ಯಸನಿಗಳ ತಾಣವಾಗಿದೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೊಹಮ್ಮದ್ ಷರೀಫ್ ಅವರಿಗೆ ಪತ್ನಿ, ಮೂವರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>