<p><strong>ಮೂಲ್ಕಿ:</strong> ಮೂಲ್ಕಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದು ನಕಲಿ ಪಾಸ್ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದ ಮೊಹಮ್ಮದ್ ಮುಸ್ತಫಾ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. </p>.<p>ಮೂಲ್ಕಿಯ ವಿಜಯ ಸನ್ನಿಧಿ ಬಳಿಯ ಖಾಸಗಿ ಬ್ಯಾಂಕೊಂದರ ಬಳಿಯಲ್ಲಿ ಮೂಲ್ಕಿ ಮೂಲ್ಕಿ ಪಟ್ಟಣ ಪಂಚಾಯಿತಿಯ ಸದಸ್ಯ ಹಕೀಂ ನೇತೃತ್ವದ ಗುಂಪು ಕಾರ್ನಾಡು ನಿವಾಸಿಗಳಾದ ತಂದೆ-ಮಗನ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ ಮೂಡಬಿದಿರೆಯ ಉದ್ಯಮಿಯೊಬ್ಬರು ತಡೆಯಲು ಬಂದಾಗ ಅವರನ್ನು ಕೊಲೆ ಮಾಡಿ ತಂದೆ-ಮಗನ ಮೇಲೆ ಕೊಲೆ ಯತ್ನ ನಡೆಸಿ ಪರಾರಿಯಾಗಿತ್ತು. ಕೊಲೆ ನಡೆಸಿದ ತಂಡದ ಸದಸ್ಯನಾಗಿದ್ದ ಮೊಹಮ್ಮದ್ ಮುಸ್ತಫಾ ಆರಂಭದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡು ನಕಲಿ ಪಾಸ್ಪೋರ್ಟ್ ಮೂಲಕ ಒಮನ್ ದೇಶದಲ್ಲಿ ನೆಲೆಸಿದ್ದ.</p>.<p>ಪ್ರಕರಣಕ್ಕೆ ಸಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಇರುತ್ತಿದ್ದರಿಂದ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು. ಆತ ಓಮನ್ನಿಂದ ನೇಪಾಳಕ್ಕೆ ಬಂದು ಅಲ್ಲಿಂದ ಭಾರತಕ್ಕೆ ಬಂದು ಮೂಲ್ಕಿಯಲ್ಲಿ ತಿರುಗಾಡುತ್ತಿದ್ದ ಎಂಬ ಮಾಹಿತಿಯಂತೆ ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಲ್ಕಿ:</strong> ಮೂಲ್ಕಿಯಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದು ನಕಲಿ ಪಾಸ್ಪೋರ್ಟ್ ಮೂಲಕ ವಿದೇಶಕ್ಕೆ ಪರಾರಿಯಾಗಿದ್ದ ಮೊಹಮ್ಮದ್ ಮುಸ್ತಫಾ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. </p>.<p>ಮೂಲ್ಕಿಯ ವಿಜಯ ಸನ್ನಿಧಿ ಬಳಿಯ ಖಾಸಗಿ ಬ್ಯಾಂಕೊಂದರ ಬಳಿಯಲ್ಲಿ ಮೂಲ್ಕಿ ಮೂಲ್ಕಿ ಪಟ್ಟಣ ಪಂಚಾಯಿತಿಯ ಸದಸ್ಯ ಹಕೀಂ ನೇತೃತ್ವದ ಗುಂಪು ಕಾರ್ನಾಡು ನಿವಾಸಿಗಳಾದ ತಂದೆ-ಮಗನ ಮೇಲೆ ಹಲ್ಲೆ ನಡೆಸಿತ್ತು. ಈ ಸಂದರ್ಭದಲ್ಲಿ ಮೂಡಬಿದಿರೆಯ ಉದ್ಯಮಿಯೊಬ್ಬರು ತಡೆಯಲು ಬಂದಾಗ ಅವರನ್ನು ಕೊಲೆ ಮಾಡಿ ತಂದೆ-ಮಗನ ಮೇಲೆ ಕೊಲೆ ಯತ್ನ ನಡೆಸಿ ಪರಾರಿಯಾಗಿತ್ತು. ಕೊಲೆ ನಡೆಸಿದ ತಂಡದ ಸದಸ್ಯನಾಗಿದ್ದ ಮೊಹಮ್ಮದ್ ಮುಸ್ತಫಾ ಆರಂಭದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡು ನಕಲಿ ಪಾಸ್ಪೋರ್ಟ್ ಮೂಲಕ ಒಮನ್ ದೇಶದಲ್ಲಿ ನೆಲೆಸಿದ್ದ.</p>.<p>ಪ್ರಕರಣಕ್ಕೆ ಸಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಇರುತ್ತಿದ್ದರಿಂದ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು. ಆತ ಓಮನ್ನಿಂದ ನೇಪಾಳಕ್ಕೆ ಬಂದು ಅಲ್ಲಿಂದ ಭಾರತಕ್ಕೆ ಬಂದು ಮೂಲ್ಕಿಯಲ್ಲಿ ತಿರುಗಾಡುತ್ತಿದ್ದ ಎಂಬ ಮಾಹಿತಿಯಂತೆ ಸಿಸಿಬಿ ಪೊಲೀಸರು ಬಂದಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>