ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟ್ಲ: ಕೊಲೆ ಯತ್ನ ಪ್ರಕರಣ: ನಾಲ್ವರ ಬಂಧನ

Last Updated 23 ಜೂನ್ 2022, 2:52 IST
ಅಕ್ಷರ ಗಾತ್ರ

ವಿಟ್ಲ: ಸಾಲೆತ್ತೂರಿನಲ್ಲಿ ನಡೆದ ಬಜರಂಗದಳದ ಸಂಚಾಲಕನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಸಾಲೆತ್ತೂರಿನಲ್ಲಿ ಎರಡು ಗುಂಪಿನ ಯುವಕರ ನಡುವೆ ಮಾರಾಮಾರಿ ನಡೆದಿದ್ದು, ಇತ್ತಂಡಗಳವರೂ ದೂರು ನೀಡಿದ್ದಾರೆ.

ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬಜರಂಗದಳ ಸಂಚಾಲಕ ಚಂದ್ರಹಾಸ ಕನ್ಯಾನ ನೀಡಿದ ದೂರಿನಂತೆ ಕಡಂಬು ನಿವಾಸಿ ಗಣೇಶ (27), ಕುಡ್ತಮುಗೇರು ನಿವಾಸಿ ದಿನೇಶ (19) ಪಡಾರು ನಿವಾಸಿ ವಿನೀತ್ (19), ಕೇಪು ಕೊಡಂದೂರು ನಿವಾಸಿ ಶಶಿಕುಮಾರ್ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

77 ಅರ್ಜಿ ತಿರಸ್ಕೃತ

ಬಂಟ್ವಾಳ: ಇಲ್ಲಿನ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕಳೆದ ಸಾಲಿನ ಮುಂಗಾರು ಮತ್ತು ಹಿಂಗಾರು ಸಹಿತ ಬೇಸಿಗೆ ಹಂಗಾಮಿನಲ್ಲಿ ಸಲ್ಲಿಸಿದ್ದ ಒಟ್ಟು 77 ಬೆಳೆ ವಿಮೆ ಅರ್ಜಿಗಳು ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡಿವೆ. ಈ ಬಗ್ಗೆ ರೈತರು ಆಕ್ಷೇಪಣೆ ಇದ್ದಲ್ಲಿ ಅರ್ಜಿ ಮರು ಪರಿಶೀಲನೆಗೆ ದಾಖಲೆ ಪತ್ರ ಸಹಿತ ಕೃಷಿ ಇಲಾಖೆಗೆ ಮನವಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಬಂಟ್ವಾಳ ಮತ್ತು ಪಾಣೆಮಂಗಳೂರು ಹಾಗೂ ವಿಟ್ಲ ಹೋಬಳಿ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT