ಕಾಸರಗೋಡು: ತಲೆಮರೆಸಿಕೊಂಡಿದ್ದ ಆರೋಪಿ, ಭದ್ರಾವತಿಯ ದೇವನಹಳ್ಳಿ ನಿವಾಸಿ ಸಯ್ಯದ್ ಆಶಿಫ್ (42) ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿ ಕರೆತಂದಿದ್ದಾರೆ. 2013 ಅ.24ರಂದು ರಾತ್ರಿ ಉಪ್ಪಳ ಮಣ್ಣಂಗುಳಿ ಎಂಬಲ್ಲಿ ಮುತ್ತಲಿಬ್ ಎಂಬುವರನ್ನು ಥಳಿಸಿ ಕೊಲೆಮಾಡಿದ್ದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.