<p><strong>ಕಾಸರಗೋಡು</strong>: ‘ಸಾಲ ಪಡೆಯಲು ದಾಖಲಾತಿ ಪತ್ರ ನೀಡದಿದ್ದರಿಂದ ನನ್ನ ತಾಯಿಯನ್ನು ಕೊಲೆ ಮಾಡಿದೆ’ ಎಂದು ಆರೋಪಿ ಮಂಜೇಶ್ವರ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.</p>.<p>ವರ್ಕಾಡಿ ನೆಲ್ಲೆಂಗಿ ನಿವಾಸಿ ಹಿಲ್ಡಾ ಮೊಂತೆರೋ (60) ಅವರನ್ನು ಗುರುವಾರ ಮುಂಜಾನೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆಕೆಯ ಪುತ್ರ, ಆರೋಪಿ ಮೆಲ್ವಿನ್ ಮೊಂತೆರೋ ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.</p>.<p>ನಿರುದ್ಯೋಗದಿಂದ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದೆ. ₹1 ಲಕ್ಷ ಸಾಲ ಪಡೆಯಲು ದಾಖಲೆ ಪತ್ರ ಕೇಳಿದಾಗ ತಾಯಿ ಒಪ್ಪಿರಲಿಲ್ಲ. ಜೊತೆಗೆ ಸಂಬಂಧಿಕರೇ ಆಗಿರುವ ನೆರೆಮನೆಯ ಲೋಲಿತಾ ಅವರೂ ಈ ವಿಚಾರದಲ್ಲಿ ತನ್ನ ತಾಯಿಗೆ ಬೆಂಬಲ ನೀಡಿದ ಕಾರಣ ಅವರನ್ನೂ ಕೊಲೆ ಮಾಡಲು ಯತ್ನಿಸಿದ್ದೆ ಎಂದು ಹೇಳಿಕೆ ನೀಡಿದ್ದಾನೆ. </p>.<p>ಘಟನೆಯ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲೆಯ ಬೈಂದೂರು ಠಾಣೆ ವ್ಯಾಪ್ತಿಯ ಕಾಲ್ತೋಡು ಬ್ಯಾತಿಯಾನಿ ಎಂಬಲ್ಲಿ ಪೊಲೀಸರು ಬಂಧಿಸಿದ್ದರು. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸರಗೋಡು</strong>: ‘ಸಾಲ ಪಡೆಯಲು ದಾಖಲಾತಿ ಪತ್ರ ನೀಡದಿದ್ದರಿಂದ ನನ್ನ ತಾಯಿಯನ್ನು ಕೊಲೆ ಮಾಡಿದೆ’ ಎಂದು ಆರೋಪಿ ಮಂಜೇಶ್ವರ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.</p>.<p>ವರ್ಕಾಡಿ ನೆಲ್ಲೆಂಗಿ ನಿವಾಸಿ ಹಿಲ್ಡಾ ಮೊಂತೆರೋ (60) ಅವರನ್ನು ಗುರುವಾರ ಮುಂಜಾನೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆಕೆಯ ಪುತ್ರ, ಆರೋಪಿ ಮೆಲ್ವಿನ್ ಮೊಂತೆರೋ ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.</p>.<p>ನಿರುದ್ಯೋಗದಿಂದ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದೆ. ₹1 ಲಕ್ಷ ಸಾಲ ಪಡೆಯಲು ದಾಖಲೆ ಪತ್ರ ಕೇಳಿದಾಗ ತಾಯಿ ಒಪ್ಪಿರಲಿಲ್ಲ. ಜೊತೆಗೆ ಸಂಬಂಧಿಕರೇ ಆಗಿರುವ ನೆರೆಮನೆಯ ಲೋಲಿತಾ ಅವರೂ ಈ ವಿಚಾರದಲ್ಲಿ ತನ್ನ ತಾಯಿಗೆ ಬೆಂಬಲ ನೀಡಿದ ಕಾರಣ ಅವರನ್ನೂ ಕೊಲೆ ಮಾಡಲು ಯತ್ನಿಸಿದ್ದೆ ಎಂದು ಹೇಳಿಕೆ ನೀಡಿದ್ದಾನೆ. </p>.<p>ಘಟನೆಯ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಡುಪಿ ಜಿಲ್ಲೆಯ ಬೈಂದೂರು ಠಾಣೆ ವ್ಯಾಪ್ತಿಯ ಕಾಲ್ತೋಡು ಬ್ಯಾತಿಯಾನಿ ಎಂಬಲ್ಲಿ ಪೊಲೀಸರು ಬಂಧಿಸಿದ್ದರು. ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>