ಆರೋಪಿ ಪತ್ತೆಗೆ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ, ಮೊಬೈಲ್ ಟವರ್ನಲ್ಲಿ ದಾಖಲಾದ ಕರೆಗಳ ಮಾಹಿತಿ ವಿಶ್ಲೇಷಿಸಲು ಹಾಗೂ ವಿವಿಧ ಲಾಡ್ಜ್, ಹೋಟೆಲ್ಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಕೇರಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿತ್ತು. ಆರೋಪಿಯನ್ನು ಕಾಸರಗೋಡಿನಲ್ಲಿ ಗುರುವಾರ ಪತ್ತೆಹಚ್ಚಲಾಗಿದೆ. ದರೋಡೆ ಉದ್ದೇಶದಿಂದ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಡಿಸಿಪಿ ತಿಳಿಸಿದ್ದಾರೆ.