<p><strong>ಬಂಟ್ವಾಳ</strong> <strong>(ದಕ್ಷಿಣ ಕನ್ನಡ):</strong> ಫರಂಗಿಪೇಟೆಯ ಯುವತಿಯನ್ನುಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ, ತನ್ನಿಂದ ಬೇರೆಯಾಗಲು ನಿರ್ಧರಿಸಿದ ಯುವತಿಗೆ ಸೋಮವಾರ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಬಂಟ್ವಾಳ ತಾಲ್ಲೂಕಿನ ಕೋಡ್ಮಣ್ ಗ್ರಾಮ ನಿವಾಸಿ ಸುಧೀರ್ (30) ಯುವತಿಯ ಕೊಲೆಗೆ ಯತ್ನಿಸಿ, ಆತ್ಮಹತ್ಯೆ ಮಾಡಿಕೊಂಡ ಆರೋಪಿ.</p><p>‘ಸುಧೀರ್ ಹಾಗೂ ಫರಂಗಿಪೇಟೆಯ ಯುವತಿ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೆಲವು ತಿಂಗಳುಗಳಿಂದ ಅವರಿಬ್ಬರ ನಡುವೆ ಮನಃಸ್ತಾಪ ಉಂಟಾಗಿತ್ತು. ಆದರೂ ಸುಧೀರ್ ಆಕೆಗೆ ಫೋನ್ ಮಾಡುತ್ತಿದ್ದ. ಆಕೆ ಹೋದಲೆಲ್ಲ ಆಕೆಯನ್ನೂ ಹಿಂಬಾಲಿಸುತ್ತಿದ್ದ. ಸೋಮವಾರ ಬೆಳಿಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದಿದ್ದ ಆತ ಮದುವೆಯಾಗುವಂತೆ ಯುವತಿಯನ್ನು ಒತ್ತಾಯಿಸಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಅವರಿಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾದ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ಯುವತಿಗೆ ಚುಚ್ಚಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಆಕೆ ಸ್ವಲ್ಪ ದೂರದಲ್ಲೇ ಕುಸಿದು ಬಿದ್ದಿದ್ದಳು. ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿಯು ಅಲ್ಲಿಂದ ತೆರಳಿ ಆ ಯುವತಿಯ ಬಾಡಿಗೆಗಿದ್ದ ಮನೆಗೆ ತೆರಳಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong> <strong>(ದಕ್ಷಿಣ ಕನ್ನಡ):</strong> ಫರಂಗಿಪೇಟೆಯ ಯುವತಿಯನ್ನುಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವಕ, ತನ್ನಿಂದ ಬೇರೆಯಾಗಲು ನಿರ್ಧರಿಸಿದ ಯುವತಿಗೆ ಸೋಮವಾರ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಬಂಟ್ವಾಳ ತಾಲ್ಲೂಕಿನ ಕೋಡ್ಮಣ್ ಗ್ರಾಮ ನಿವಾಸಿ ಸುಧೀರ್ (30) ಯುವತಿಯ ಕೊಲೆಗೆ ಯತ್ನಿಸಿ, ಆತ್ಮಹತ್ಯೆ ಮಾಡಿಕೊಂಡ ಆರೋಪಿ.</p><p>‘ಸುಧೀರ್ ಹಾಗೂ ಫರಂಗಿಪೇಟೆಯ ಯುವತಿ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕೆಲವು ತಿಂಗಳುಗಳಿಂದ ಅವರಿಬ್ಬರ ನಡುವೆ ಮನಃಸ್ತಾಪ ಉಂಟಾಗಿತ್ತು. ಆದರೂ ಸುಧೀರ್ ಆಕೆಗೆ ಫೋನ್ ಮಾಡುತ್ತಿದ್ದ. ಆಕೆ ಹೋದಲೆಲ್ಲ ಆಕೆಯನ್ನೂ ಹಿಂಬಾಲಿಸುತ್ತಿದ್ದ. ಸೋಮವಾರ ಬೆಳಿಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿಗೆ ಬಂದಿದ್ದ ಆತ ಮದುವೆಯಾಗುವಂತೆ ಯುವತಿಯನ್ನು ಒತ್ತಾಯಿಸಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಅವರಿಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಾದ ಆರೋಪಿ ಸುಧೀರ್ ತಾನು ತಂದಿದ್ದ ಚಾಕುವಿನಿಂದ ಯುವತಿಗೆ ಚುಚ್ಚಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಆಕೆ ಸ್ವಲ್ಪ ದೂರದಲ್ಲೇ ಕುಸಿದು ಬಿದ್ದಿದ್ದಳು. ಆಕೆ ಮೃತಪಟ್ಟಿರಬಹುದೆಂದು ಭಾವಿಸಿ ಆರೋಪಿಯು ಅಲ್ಲಿಂದ ತೆರಳಿ ಆ ಯುವತಿಯ ಬಾಡಿಗೆಗಿದ್ದ ಮನೆಗೆ ತೆರಳಿ, ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದು, ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>