<p><strong>ಮಂಗಳೂರು:</strong> ‘ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.</p>.<p>ಬಜಪೆ ಬಳಿ ಈಚೆಗೆ ಹತ್ಯೆಗೀಡಾದ ಹಿಂದುತ್ವ ಪರ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಚಿವರು ಹೀಗೆ ಪ್ರತಿಕ್ರಿಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಅವರು, ‘ಸುಹಾಸ್ ಶೆಟ್ಟಿ ಕೊಲೆ ಏಕೆ ಆಗಿದೆ ಎಂಬುದನ್ನು ತಿಳಿದಿರುವ ಸರ್ಕಾರ, ತಪ್ಪಿತಸ್ಥರನ್ನು ಬಂಧಿಸಿ ಜವಾಬ್ದಾರಿ ನಿರ್ವಹಿಸಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದರು.</p>.<p>‘ಆರೋಪಿಗಳನ್ನು ಬಂಧಿಸಿದ್ದೇವೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ಎನ್ಐಎಗೆ ತನಿಖೆ ವಹಿಸಬೇಕು ಎಂಬ ಬಿಜೆಪಿಯವರ ಒತ್ತಾಯಕ್ಕೆ ಉತ್ತರಿಸಲು ಆಗುವುದಿಲ್ಲ. ಬಿಜೆಪಿಯವರು ಊಹಾಪೋಹದ ಹೇಳಿಕೆ ಬಿಟ್ಟು ಸ್ಪಷ್ಟ ಮಾಹಿತಿ ಇದ್ದರೆ ತಿಳಿಸಲಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಹೇಳಿದರು.</p>.<p>ಬಜಪೆ ಬಳಿ ಈಚೆಗೆ ಹತ್ಯೆಗೀಡಾದ ಹಿಂದುತ್ವ ಪರ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಚಿವರು ಹೀಗೆ ಪ್ರತಿಕ್ರಿಯಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಅವರು, ‘ಸುಹಾಸ್ ಶೆಟ್ಟಿ ಕೊಲೆ ಏಕೆ ಆಗಿದೆ ಎಂಬುದನ್ನು ತಿಳಿದಿರುವ ಸರ್ಕಾರ, ತಪ್ಪಿತಸ್ಥರನ್ನು ಬಂಧಿಸಿ ಜವಾಬ್ದಾರಿ ನಿರ್ವಹಿಸಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದರು.</p>.<p>‘ಆರೋಪಿಗಳನ್ನು ಬಂಧಿಸಿದ್ದೇವೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ಎನ್ಐಎಗೆ ತನಿಖೆ ವಹಿಸಬೇಕು ಎಂಬ ಬಿಜೆಪಿಯವರ ಒತ್ತಾಯಕ್ಕೆ ಉತ್ತರಿಸಲು ಆಗುವುದಿಲ್ಲ. ಬಿಜೆಪಿಯವರು ಊಹಾಪೋಹದ ಹೇಳಿಕೆ ಬಿಟ್ಟು ಸ್ಪಷ್ಟ ಮಾಹಿತಿ ಇದ್ದರೆ ತಿಳಿಸಲಿ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>