ಹಂಪನಕಟ್ಟಾದಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೇಜೇಂದ್ರ ಅವರು ಮೊದಲು ನುಡಿಸಿದ್ದು ಮಳೆರಾಗಗಳಲ್ಲಿ ಒಂದಾದ ರಾಮದಾಸಿ ಮಲ್ಹಾರ್. ಕೋಮಲ ಮತ್ತು ಶುದ್ಧ ಗಾಂಧಾರಗಳೆರಡೂ ಬಳಕೆಯಾಗುವುದರಿಂದ ಹೆಚ್ಚು ಮಾಧುರ್ಯ ನೀಡುವ ಈ ರಾಗದ ಸಂಪೂರ್ಣ ಸೊಬಗನ್ನು ಸಹೃದಯರ ಎದೆಯಾಳಕ್ಕೆ ಇಳಿಸುವಲ್ಲಿ ತೇಜೇಂದ್ರ ಕುಮಾರ್ ಯಶಸ್ವಿಯಾದರು.