ಎ.ಕೆ. ಕುಕ್ಕಿಲ ಅವರು ಕಥೆಗಾರ, ಸೃಜನಶೀಲ ಬರಹಗಾರ ಹಾಗೂ ವಿಮರ್ಶಕರಾಗಿ ಗುರುತಿಸಿಕೊಂಡವರು. ‘ದಾಯಿರ (ಕಥಾ ಸಂಕಲನ), ‘ಜಾಗತೀಕರಣ ಮತ್ತು ಸಂಸ್ಕೃತಿ (ವೈಚಾರಿಕ ಕೃತಿ), ‘ಚಾಟಿಯೇಟು’ (ಸನ್ಮಾರ್ಗ ಸಂಪಾದಕೀಯ ಸಂಗ್ರಹ), ‘ಮದ್ಯಪಾನ: ಪರ, ವಿರೋಧ ಮತ್ತು ನಿಜ’ (ವೈಚಾರಿಕ ಕೃತಿ) ಮತ್ತು ‘ಸರಸ ಸಲ್ಲಾಪ’ (ಲಿಲಿತ ಪ್ರಬಂಧ) ಎ.ಕೆ. ಕುಕ್ಕಿಲರ ಇತರ ಪ್ರಕಟಿತ ಕೃತಿಗಳು. ಇವರ ‘ದಾಯಿರ’ ಕೃತಿಯು 2003ನೇ ಸಾಲಿನ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ತನ್ನದಾಗಿಸಿಕೊಂಡಿದೆ.