<p><strong>ಪುತ್ತೂರು</strong>: ‘ಮುಸ್ಲಿಂ ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಅವರ ಅಪ್ಪ ಅಮ್ಮ, ಜಮಾತ್ನವರು ಚಿಂತಿಸುತ್ತಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಈ ಚಿಂತೆ ಬೇಡ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ತಿರುಗೇಟು ನೀಡಿದೆ.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮುಸ್ಲಿಂ ಯುವತಿಯನ್ನು ವಿವಾಹವಾದ ಹಿಂದೂ ಯುವಕನಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು. ಮುಸ್ಲಿಂ ಸಮುದಾಯದ ಖಬರ್ಸ್ಥಾನಗಳ ಬಗ್ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದರು.</p>.<p>‘ಧರ್ಮಸ್ಥಳ ಪ್ರಕರಣದಲ್ಲಿ ದೂರು ನೀಡಿರುವ ಸಾಕ್ಷಿ ದೂರುದಾರ ಮುಸ್ಲಿಂ ಸಮಾಜಕ್ಕೆ ಸೇರಿದವನು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಷೇಧಿತ ಸಂಘಟನೆ ಪಿಎಫ್ಐ ಕೈವಾಡದ ಬಗ್ಗೆ ಮಾಹಿತಿ ಇದ್ದರೆ ಅವರದೇ ಕೇಂದ್ರ ಸರ್ಕಾರದ ಮೂಲಕ ತನಿಖೆ ಕೈಗೊಳ್ಳಲಿ’ ಎಂದು ಸವಾಲು ಹಾಕಿದರು.</p>.<p>‘ಧರ್ಮಸ್ಥಳ ವಿಚಾರವಾಗಿ ಮುಸ್ಲಿಂ ಸಮುದಾಯ ಯಾವೊಬ್ಬ ಪ್ರಮುಖರು ಮಾತನಾಡಿಲ್ಲ. ಮುಸ್ಲಿಂ ಸಮುದಾಯದ ಬಗ್ಗೆ ಹೆಗ್ಗಡೆಯವರಿಗೆ ಪ್ರೀತಿ ಇದೆ. ಅಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ. ಆದರೆ ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಈ ಹಿಂದೆ ಯತ್ನಿಸಿ ಅದಕ್ಕೆ ಪರ್ಯಾಯವಾಗಿ ಕನ್ಯಾಡಿ ಕ್ಷೇತ್ರದ ಆರಂಭಕ್ಕೆ ಕಾರಣರಾದ ಜನಾರ್ದನ ಪೂಜಾರಿ ಅವರಿಗೆ ಈಗ ಧರ್ಮಸ್ಥಳದ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಅದಕ್ಕಾಗಿ ಅವರು ಈ ರೀತಿಯ ಹೇಳಿಕೆ ನೀಡಲು ಆರಂಭಿಸಿದ್ದಾರೆ’ ಎಂದು ಅವರು ದೂರಿದರು.</p>.<p>ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ ಅಶ್ರಫ್ ಬಾವು ಪಡೀಲ್, ಪ್ರಧಾನ ಕಾರ್ಯದರ್ಶಿ ನೌಷದ್ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಮುಖಂಡ ಹಂಝ ಕಬಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು</strong>: ‘ಮುಸ್ಲಿಂ ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಅವರ ಅಪ್ಪ ಅಮ್ಮ, ಜಮಾತ್ನವರು ಚಿಂತಿಸುತ್ತಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಈ ಚಿಂತೆ ಬೇಡ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ತಿರುಗೇಟು ನೀಡಿದೆ.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮುಸ್ಲಿಂ ಯುವತಿಯನ್ನು ವಿವಾಹವಾದ ಹಿಂದೂ ಯುವಕನಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು. ಮುಸ್ಲಿಂ ಸಮುದಾಯದ ಖಬರ್ಸ್ಥಾನಗಳ ಬಗ್ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದರು.</p>.<p>‘ಧರ್ಮಸ್ಥಳ ಪ್ರಕರಣದಲ್ಲಿ ದೂರು ನೀಡಿರುವ ಸಾಕ್ಷಿ ದೂರುದಾರ ಮುಸ್ಲಿಂ ಸಮಾಜಕ್ಕೆ ಸೇರಿದವನು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಷೇಧಿತ ಸಂಘಟನೆ ಪಿಎಫ್ಐ ಕೈವಾಡದ ಬಗ್ಗೆ ಮಾಹಿತಿ ಇದ್ದರೆ ಅವರದೇ ಕೇಂದ್ರ ಸರ್ಕಾರದ ಮೂಲಕ ತನಿಖೆ ಕೈಗೊಳ್ಳಲಿ’ ಎಂದು ಸವಾಲು ಹಾಕಿದರು.</p>.<p>‘ಧರ್ಮಸ್ಥಳ ವಿಚಾರವಾಗಿ ಮುಸ್ಲಿಂ ಸಮುದಾಯ ಯಾವೊಬ್ಬ ಪ್ರಮುಖರು ಮಾತನಾಡಿಲ್ಲ. ಮುಸ್ಲಿಂ ಸಮುದಾಯದ ಬಗ್ಗೆ ಹೆಗ್ಗಡೆಯವರಿಗೆ ಪ್ರೀತಿ ಇದೆ. ಅಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ. ಆದರೆ ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಈ ಹಿಂದೆ ಯತ್ನಿಸಿ ಅದಕ್ಕೆ ಪರ್ಯಾಯವಾಗಿ ಕನ್ಯಾಡಿ ಕ್ಷೇತ್ರದ ಆರಂಭಕ್ಕೆ ಕಾರಣರಾದ ಜನಾರ್ದನ ಪೂಜಾರಿ ಅವರಿಗೆ ಈಗ ಧರ್ಮಸ್ಥಳದ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಅದಕ್ಕಾಗಿ ಅವರು ಈ ರೀತಿಯ ಹೇಳಿಕೆ ನೀಡಲು ಆರಂಭಿಸಿದ್ದಾರೆ’ ಎಂದು ಅವರು ದೂರಿದರು.</p>.<p>ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ ಅಶ್ರಫ್ ಬಾವು ಪಡೀಲ್, ಪ್ರಧಾನ ಕಾರ್ಯದರ್ಶಿ ನೌಷದ್ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಮುಖಂಡ ಹಂಝ ಕಬಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>