ಧಾರ್ಮಿಕ ಭಾವನೆ ಕೆರಳಿಸುವ ಕೃತ್ಯಗಳು ಸತತವಾಗಿ ನಡೆದರೂ, ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಇಟ್ಟು ಜನತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ದಾರೆ. ಘಟನೆಗಳು ನಡೆದಾಗ ವಿಶ್ವ ಹಿಂದು ಪರಿಷತ್, ಬಜರಂಗದಳ, ಹಿಂದು ಜಾಗರಣ ವೇದಿಕೆ ಮತ್ತು ನಾಗಬನದ ಭಕ್ತರು ಉದ್ವಿಗ್ನ ಸ್ಥಿತಿಯ ವಾತಾವರಣ ಉಂಟು ಮಾಡದೆ ಶಾಂತಿಯುತ ಪ್ರತಿಭಟಿಸಿದ್ದಾರೆ. ಪೊಲೀಸರು ಕೂಡ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ಇದರ ರೂವಾರಿಗಳನ್ನು ಪತ್ತೆ ಹಚ್ಚುವ ಕೆಲಸ ಆಗಬೇಕು. ಅಲ್ಲದೆ ತಮ್ಮ ಪಕ್ಷಕ್ಕೆ ಕುಂದುಂಟಾಗುವ ರೀತಿಯಲ್ಲಿ ಹುನ್ನಾರ ಮಾಡಿ, ಪದೇ ಪದೇ ಇಂತಹ ಘಟನೆಗಳನ್ನು ಮಾಡಿಸಿರುವುದರ ಸತ್ಯಾಸತ್ಯತೆ ಹೊರಗೆ ಬರಬೇಕು ಎಂದು ಒತ್ತಾಯಿಸಿದರು.