‘ಕುಂದಾಪುರ ಕಂಚುಗೋಡು ಮೀನುಗಾರ ಕುಟುಂಬದಿಂದ ಬಂದ ನಾನು ಬಾಲ್ಯದಲ್ಲೇ ಸಮುದ್ರದಲ್ಲಿ ಈಜುತ್ತಿದ್ದೆನು. ಆದರೆ, ಈಜಿನ ವಿವಿಧ ಶೈಲಿಗಳನ್ನು ತರಬೇತುದಾರ ಬಿ. ಕೆ. ನಾಯ್ಕ್ ಕಲಿಸಿದರು. ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಮೂಲಕ ಯೋಗ ಕಲಿತುಕೊಂಡೆ. ಕಳೆದ ಜನವರಿಯಲ್ಲಿ ಗುಜರಾತ್ನ ವಡೋದರಾದಲ್ಲಿ ನಡೆದ ರಾಷ್ಟ್ರ ಮಟ್ಟದ ಈಜುಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ, ಒಂದು ಕಂಚಿನ ಪದಕ ಗೆದ್ದಿದ್ದೆ. ಇದೇ ರಾಷ್ಟ್ರೀಯ ದಾಖಲೆ ನಿರ್ಮಿಸಲು ಪ್ರೇರಣೆಯಾಯಿತು’ ಎಂದು ತಿಳಿಸಿದರು.