ಉದ್ರಿಕ್ತ ವಾತಾವರಣ: ಘಟನೆಯಿಂದ ಸ್ಥಳದಲ್ಲಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಕೊಣಾಜೆ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಾಲ್ವರನ್ನು ವಶಕ್ಕೆ ಪಡೆಯುತ್ತಿದ್ದಂತೆ, ಸ್ಥಳೀಯರು ಪೊಲೀಸರೊಂದಿಗೆ ಮಾತಿನ ಚಕಮಕಿಗೆ ಇಳಿದರು. ನಂತರ ಕೊಣಾಜೆ ಪೊಲೀಸ್ ಠಾಣೆ ಎದುರು ಜಮಾಯಿಸಿದರು. ಎಸಿಪಿ ರಾಮರಾವ್, ಕೊಣಾಜೆ ಠಾಣಾಧಿಕಾರಿ ರವೀಶ ನಾಯಕ್, ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ಸ್ಥಳಕ್ಕೆ ಬಂದು, ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.