‘ಈ ದೇಶದಲ್ಲಿ ಹುಟ್ಟಿ ಬೆಳೆದು, ಆಹಾರ, ಗಾಳಿ ಸ್ವೀಕರಿಸಿ ಇನ್ನೊಂದು ದೇಶಕ್ಕೆ ಜೈಕಾರ ಹಾಕುವುದು, ಅದರಲ್ಲೂ ಪಾಕಿಸ್ತಾನಕ್ಕೆ ಜೈಕಾರ ಹಾಕುವುದು ದೇಶದ್ರೋಹವಾಗಿದೆ. ಆಕೆಯ (ಅಮೂಲ್ಯ) ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ? ಎಂಬುವುದನ್ನೂ ಪತ್ತೆ ಮಾಡಿ, ಸಂಘಟಕರ ವಿರುದ್ಧವೂ ಕ್ರಮಕೈಗೊಳ್ಳಬೇಕು’ ಎಂದು ‘ಪಾಕಿಸ್ತಾನ ಜಿಂದಾಬಾದ್ ಎಂಬ ಅಮೂಲ್ಯ ಘೋಷಣೆ’ ಕುರಿತು ಅವರು ಪ್ರತಿಕ್ರಿಯಿಸಿದರು.