ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೆಲ್ಲ ಹಿಂದುತ್ವ ಹೋರಾಟಗಾರರು, ಹಿಂದೂ ಸಮಾಜದ ಮೇಲೆ ದಬ್ಬಾಳಿಕೆ ಆಗುತ್ತಿದೆ. ಮಂಡ್ಯ ಜಿಲ್ಲೆಯ ಕರೆಗೋಡಿನಲ್ಲಿ ಹನುಮ ಭಕ್ತರು ಹಾಕಿದ್ದ ಧ್ವಜವನ್ನು ಅಧಿಕಾರಿಗಳ ಮೂಲಕ ಕಿತ್ತೊಗೆದು, ರಾಮ ಭಕ್ತರಿಗೆ ಅಪಮಾನ ಮಾಡಲಾಗಿದೆ. ರಾಮ, ಹನುಮ ಭಕ್ತರ ಮೇಲೆ ಲಾಠಿ ಚಾರ್ಜ್ ಮಾಡಿ, ಹೋರಾಟ ದಮನಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ’ ಎಂದರು.