ಕೊಲೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಹಂತಕರು ಹಾಗೂ ಸಂಚು ರೂಪಿಸಿದವರನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ರಾಷ್ಟ್ರೀಯ ತನಿಖಾ ದಳದ ಸಮಗ್ರ ತನಿಖೆಯಿಂದ ಇನ್ನಷ್ಟು ವಿವರ ಲಭ್ಯವಾಗಲಿದೆ. ಸಮಾಜಘಾತುಕ ಶಕ್ತಿಗಳನ್ನು ನಿರ್ನಾಮ ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.