ಮಂಗಳೂರು: ನಗರದ ಕಂಕನಾಡಿ ಮಸೀದಿ ಮುಂದಿನ ರಸ್ತೆಯಲ್ಲಿ ನಮಾಜ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಸೀದಿಯ ಆಡಳಿತ ಮಂಡಳಿಯೇ ವಿಷಾದ ವ್ಯಕ್ತಪಡಿಸಿ ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇವೆಂದು ವಿವಾದಕ್ಕೆ ತೆರೆ ಎಳೆದರೂ, ಪೊಲೀಸರು ಮಾತ್ರ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಅಣತಿಯಂತೆ ಶರಣ್ ಪಂಪ್ವೆಲ್ ಸೇರಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲೆಯೇ ಪ್ರಕರಣ ದಾಖಲಿಸಿರುವುದು ಅಕ್ಷಮ್ಯ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.