ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಡಿಕೆ ಈಡೇರಿಕೆಗಾಗಿ ನಡೆಸಿದ ಪಾದಯಾತ್ರೆಗೆ ಯಶಸ್ಸು ದೊರೆತಿದ್ದು, ಫೆ.14ರಂದು ಬೆಂಗಳೂರಿನ ಫ್ರೀಡ್ಂ ಪಾರ್ಕ್ನಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು, ಬಿಲ್ಲವರ ಎಲ್ಲ ಬೇಡಿಕೆಗಳನ್ನು ಪರಿಗಣಿಸುವ ಭರವಸೆ ನೀಡಿದ್ದಾರೆ. ಹಾಗಾಗಿ, ಉಪವಾಸ ಸತ್ಯಾಗ್ರಹ ಕೈಬಿಡಲಾಗಿದೆ. ಸಮುದಾಯ ಜಾಗೃತಿಯ ಮುಂದುವರಿದ ಭಾಗವಾಗಿ ಗ್ರಾಮೀಣ ಮಟ್ಟದಲ್ಲಿ, ವಿಶೇಷವಾಗಿ ಯುವಜನರಲ್ಲಿ ನಾರಾಯಣಗುರುಗಳ ತತ್ವದ ಅರಿವು ಮೂಡಿಸಬೇಕಾಗಿದೆ. ಧರ್ಮ ರಾಜಕಾರಣ, ದ್ವೇಷ ರಾಜಕಾರಣದ ಹತ್ಯೆಗಳು ಕೊನೆಯಾಗಬೇಕು ಎಂಬುದು ನಮ್ಮ ಆಶಯವಾಗಿದೆ’ ಎಂದರು.