ಮಂಗಳೂರು: ‘10ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದಿಂದ ನಾರಾಯಣ ಗುರು ಹಾಗೂ ಪೆರಿಯಾರ್ ವಿಚಾರಗಳನ್ನು ಕೈಬಿಟ್ಟು, ಇದೀಗ ಅದನ್ನು ಅವಸರದಿಂದ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದೊಳಗೆ ಸೇರಿಸಿರುವುದು ಗಾಯಕ್ಕೆ ಉಪ್ಪು ಸವರಿದಂತಾಗಿದೆ’ ಎಂದು ಬಿಲ್ಲವ ಮುಖಂಡ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಆರೋಪಿಸಿದ್ದಾರೆ.