<p><strong>ಮಂಗಳೂರು</strong>: ‘ಶಿಕ್ಷಣ ವ್ಯವಸ್ಥೆಯ ಭ್ರಷ್ಟಾಚಾರಕ್ಕೆ, ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ, ಪರಿಣಾಮಗಳ ಬಗ್ಗೆ ಯೋಚಿಸದೇ ಸಂಘಟಿತರಾಗಿ ಹೋರಾಡಬೇಕಾಗಿದೆ. ಹೊಸದಾಗಿ ಆರಂಭವಾಗಲಿರುವ ಇ-ಆಫೀಸ್ ವ್ಯವಸ್ಥೆ ಒಂದಷ್ಟು ಸಮಸ್ಯೆಗಳನ್ನು ನಿವಾರಿಸುವ ಭರವಸೆಯಿದೆ’ ಎಂದು ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ (ನ್ಯಾಕ್) ಆಶ್ರಯದಲ್ಲಿ ನಗರದ ಎಸ್ಡಿಎಂ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪದಲ್ಲಿ ಉಪನ್ಯಾಸಕರ ಸಮಸ್ಯೆಗಳಿಗೆ ಅವರು ಉತ್ತರಿಸಿದರು.</p>.<p>2002 ರಲ್ಲಿ ಅಂದಿನ ಎಸ್.ಎಂ ಕೃಷ್ಣ ಸರ್ಕಾರ ತೆಗೆದುಕೊಂಡ 10 ಅಂಶಗಳ ನಿರ್ಣಯದಿಂದ ನೇಮಕಾತಿ, ವೇತನ ಬಿಡುಗಡೆಗೆ ಅಡ್ಡಿಯಾಗಿದೆ. ಜತೆಗೆ ಶಿಕ್ಷಣ ಇಲಾಖೆಯ ಪುನಃಸ್ಥಾಪನೆಯಾಗಬೇಕಿದೆ. ಈ ಕುರಿತು ಇದೇ 14 ರಂದು ಶಿಕ್ಷಣ ಸಚಿವರ ಜತೆ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿಸಿದರು.</p>.<p>ಸಂಶೋಧನೆಗೆ ಯುಜಿಸಿ ಬಿಡುಗಡೆ ಮಾಡುವ ಸಹಾಯಧನದ ಕೊರತೆ ಕುರಿತು ಸ್ಪಷ್ಟನೆ ನೀಡಿದ ಯುಜಿಸಿ ಸದಸ್ಯ ಡಾ.ಗೋಪಾಲ ರೆಡ್ಡಿ, ‘ಮಾತೃ ಸಂಸ್ಥೆಯ ಒಪ್ಪಿಗೆ, ಅಗತ್ಯ ದಾಖಲೆಗಳು ಮತ್ತು 12ಬಿ ಮಾನ್ಯತೆ ಇದ್ದರೆ ಅನುದಾನಕ್ಕೆ ಸಮಸ್ಯೆಯಾಗುವುದಿಲ್ಲ’ ಎಂದರು.</p>.<p>ಖಾಸಗಿ ಸಂಸ್ಥೆಗಳಲ್ಲಿ ದೊರೆಯುತ್ತಿರುವ ಅತ್ಯಲ್ಪ ವೇತನದ ಬಗ್ಗೆ ಸ್ಪಷ್ಟನೆ ನೀಡಿದ ಅವರು, ‘ಸಂಸ್ಥೆಗಳು ತಾವು ಉತ್ತಮ ವೇತನ ನೀಡುತ್ತಿರುವುದಾಗಿ ಯುಜಿಸಿಗೆ ದಾಖಲೆ ಸಲ್ಲಿಸುತ್ತವೆ. ಆದರೆ ಅದರ ಸತ್ಯಾಸತ್ಯತೆ ಪರಿಶೀಲಿಸುವ ವ್ಯವಸ್ಥೆ ಯುಜಿಸಿಯಲ್ಲಿ ಇಲ್ಲ, ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿ, ‘ವಿಶ್ವವಿದ್ಯಾಲಯ ಸಂಶೋಧನೆಯ ವಿದ್ಯಾರ್ಥಿ ಮೇಲೆ ₹6.94 ಲಕ್ಷ ಖರ್ಚು ಮಾಡುತ್ತಿದೆ. ಆದರೆ ಪೇಟೆಂಟ್, ಪ್ರಕಟಣೆ ಅಷ್ಟಾಗಿ ಆಗುತ್ತಿಲ್ಲ. ನಮ್ಮ ಹಕ್ಕು ಪಡೆಯುವ ಕೆಲಸವನ್ನು ಕೂಡ ಯೋಚಿಸಬೇಕು. ಸಂಬಳದ ಸಮಸ್ಯೆಗೆ ನಾವು ಮತ್ತೆ ಮಿನಿಮಮ್ ಚೆಕ್ ಮೂಲಕ ಸಂಬಳ ಪಾವತಿಯನ್ನು ಒತ್ತಾಯಿಸಿ ಹೋರಾಟ ಮಾಡಬೇಕಿದೆ’ ಎಂದು ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ನಿರಂಜನ ವಾನಳ್ಳಿ , ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಬಾಲಕೃಷ್ಣ ಭಟ್, ಕೆಆರ್ಎಂಎಸ್ಎಸ್ ಕಾರ್ಯದರ್ಶಿ ಡಾ.ಜಿ.ಸಿ. ರಾಜಣ್ಣ, ಎಸ್ಡಿಎಂ ಬಿಬಿಎಂ ಕಾಲೇಜಿನ ಪ್ರಾಂಶುಪಾಲೆ ಅರುಣಾ ಕಾಮತ್, ನಿರ್ದೇಶಕಿ ಸೀಮಾ ಶೆಣೈ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಶಿಕ್ಷಣ ವ್ಯವಸ್ಥೆಯ ಭ್ರಷ್ಟಾಚಾರಕ್ಕೆ, ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ, ಪರಿಣಾಮಗಳ ಬಗ್ಗೆ ಯೋಚಿಸದೇ ಸಂಘಟಿತರಾಗಿ ಹೋರಾಡಬೇಕಾಗಿದೆ. ಹೊಸದಾಗಿ ಆರಂಭವಾಗಲಿರುವ ಇ-ಆಫೀಸ್ ವ್ಯವಸ್ಥೆ ಒಂದಷ್ಟು ಸಮಸ್ಯೆಗಳನ್ನು ನಿವಾರಿಸುವ ಭರವಸೆಯಿದೆ’ ಎಂದು ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಅಭಿಪ್ರಾಯಪಟ್ಟರು.</p>.<p>ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ, ಮಂಗಳೂರು ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ (ನ್ಯಾಕ್) ಆಶ್ರಯದಲ್ಲಿ ನಗರದ ಎಸ್ಡಿಎಂ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪದಲ್ಲಿ ಉಪನ್ಯಾಸಕರ ಸಮಸ್ಯೆಗಳಿಗೆ ಅವರು ಉತ್ತರಿಸಿದರು.</p>.<p>2002 ರಲ್ಲಿ ಅಂದಿನ ಎಸ್.ಎಂ ಕೃಷ್ಣ ಸರ್ಕಾರ ತೆಗೆದುಕೊಂಡ 10 ಅಂಶಗಳ ನಿರ್ಣಯದಿಂದ ನೇಮಕಾತಿ, ವೇತನ ಬಿಡುಗಡೆಗೆ ಅಡ್ಡಿಯಾಗಿದೆ. ಜತೆಗೆ ಶಿಕ್ಷಣ ಇಲಾಖೆಯ ಪುನಃಸ್ಥಾಪನೆಯಾಗಬೇಕಿದೆ. ಈ ಕುರಿತು ಇದೇ 14 ರಂದು ಶಿಕ್ಷಣ ಸಚಿವರ ಜತೆ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿಸಿದರು.</p>.<p>ಸಂಶೋಧನೆಗೆ ಯುಜಿಸಿ ಬಿಡುಗಡೆ ಮಾಡುವ ಸಹಾಯಧನದ ಕೊರತೆ ಕುರಿತು ಸ್ಪಷ್ಟನೆ ನೀಡಿದ ಯುಜಿಸಿ ಸದಸ್ಯ ಡಾ.ಗೋಪಾಲ ರೆಡ್ಡಿ, ‘ಮಾತೃ ಸಂಸ್ಥೆಯ ಒಪ್ಪಿಗೆ, ಅಗತ್ಯ ದಾಖಲೆಗಳು ಮತ್ತು 12ಬಿ ಮಾನ್ಯತೆ ಇದ್ದರೆ ಅನುದಾನಕ್ಕೆ ಸಮಸ್ಯೆಯಾಗುವುದಿಲ್ಲ’ ಎಂದರು.</p>.<p>ಖಾಸಗಿ ಸಂಸ್ಥೆಗಳಲ್ಲಿ ದೊರೆಯುತ್ತಿರುವ ಅತ್ಯಲ್ಪ ವೇತನದ ಬಗ್ಗೆ ಸ್ಪಷ್ಟನೆ ನೀಡಿದ ಅವರು, ‘ಸಂಸ್ಥೆಗಳು ತಾವು ಉತ್ತಮ ವೇತನ ನೀಡುತ್ತಿರುವುದಾಗಿ ಯುಜಿಸಿಗೆ ದಾಖಲೆ ಸಲ್ಲಿಸುತ್ತವೆ. ಆದರೆ ಅದರ ಸತ್ಯಾಸತ್ಯತೆ ಪರಿಶೀಲಿಸುವ ವ್ಯವಸ್ಥೆ ಯುಜಿಸಿಯಲ್ಲಿ ಇಲ್ಲ, ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮಾತನಾಡಿ, ‘ವಿಶ್ವವಿದ್ಯಾಲಯ ಸಂಶೋಧನೆಯ ವಿದ್ಯಾರ್ಥಿ ಮೇಲೆ ₹6.94 ಲಕ್ಷ ಖರ್ಚು ಮಾಡುತ್ತಿದೆ. ಆದರೆ ಪೇಟೆಂಟ್, ಪ್ರಕಟಣೆ ಅಷ್ಟಾಗಿ ಆಗುತ್ತಿಲ್ಲ. ನಮ್ಮ ಹಕ್ಕು ಪಡೆಯುವ ಕೆಲಸವನ್ನು ಕೂಡ ಯೋಚಿಸಬೇಕು. ಸಂಬಳದ ಸಮಸ್ಯೆಗೆ ನಾವು ಮತ್ತೆ ಮಿನಿಮಮ್ ಚೆಕ್ ಮೂಲಕ ಸಂಬಳ ಪಾವತಿಯನ್ನು ಒತ್ತಾಯಿಸಿ ಹೋರಾಟ ಮಾಡಬೇಕಿದೆ’ ಎಂದು ತಿಳಿಸಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ನಿರಂಜನ ವಾನಳ್ಳಿ , ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಬಾಲಕೃಷ್ಣ ಭಟ್, ಕೆಆರ್ಎಂಎಸ್ಎಸ್ ಕಾರ್ಯದರ್ಶಿ ಡಾ.ಜಿ.ಸಿ. ರಾಜಣ್ಣ, ಎಸ್ಡಿಎಂ ಬಿಬಿಎಂ ಕಾಲೇಜಿನ ಪ್ರಾಂಶುಪಾಲೆ ಅರುಣಾ ಕಾಮತ್, ನಿರ್ದೇಶಕಿ ಸೀಮಾ ಶೆಣೈ ವೇದಿಕೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>