<p><strong>ಮಂಗಳೂರು:</strong> ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯದಲ್ಲಿ ಏಳು ದಿನಗಳ ರಾಷ್ಟ್ರೀಯ ಭಾವೈಕ್ಯ ಶಿಬಿರ ಆರಂಭವಾಗಿದ್ದು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಗುಜರಾತ್ ರಾಜ್ಯಗಳ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ. </p>.<p>ರಾಜ್ಯ ಎನ್.ಎಸ್.ಎಸ್. ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರ ಮತ್ತು ಎನ್.ಎಸ್.ಎಸ್. ಘಟಕದಲ್ಲಿ ಶುಕ್ರವಾರದಿಂದ ಪ್ರಾರಂಭವಾಗಿರುವ ಶಿಬಿರಕ್ಕೆ ವಿಧಾನ ಸಭೆ ಅಧ್ಯಕ್ಷ ಯು.ಟಿ. ಖಾದರ್ ಚಾಲನೆ ನೀಡಿದರು. </p>.<p>ದೇಶದ ಏಕತೆ ಮತ್ತು ಯುವ ಸಬಲೀಕರಣಕ್ಕೆ ರಾಷ್ಟ್ರೀಯ ಭಾವೈಕ್ಯ ಶಿಬಿರ ನೀಡುವ ಕೊಡುಗೆ ಮಹತ್ವದ್ದು. ಯುವಜನರಲ್ಲಿ ಆತ್ಮವಿಶ್ವಾಸ ಬೆಳೆಸುವ, ಬದುಕು ರೂಪಿಸಲು ಸಹಕಾರಿಯಾಗಿರುವ ಎನ್.ಎಸ್.ಎಸ್.ನ ಆದರ್ಶ ಶ್ಲಾಘನೀಯ ಎಂದು ಖಾದರ್ ಹೇಳಿದರು.</p>.<p>ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಪ್ರತಾಪ್ ಲಿಂಗಯ್ಯ, ಪ್ರಾದೇಶಿಕ ನಿರ್ದೇಶಕ ಕಾರ್ತಿಗೆನ್, ಲೆಫ್ಟಿನೆಂಟ್ ಕರ್ನಲ್ ಗ್ರೇಸಿಯಸ್ ಸಿಕ್ವೇರಾ ಶುಭ ಹಾರೈಸಿದರು.</p>.<p>ಕಾರ್ಯಕ್ರಮಕ್ಕೆ ಮುನ್ನ ಕುತ್ತಾರು ತನಕ ನಡೆದ ಮೆರವಣಿಗೆಗೆ ಕುಲಸಚಿವ ಗಂಗಾಧರ ಸೋಮಯಾಜಿ ಚಾಲನೆ ನೀಡಿದರು. </p><p>ಎನ್.ಎಸ್.ಎಸ್ ಘಟಕ ಸಂಯೋಜಕಿ ಡಾ. ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಅವರಿಲ್ ರೆಬೊಲ್ಲೊ ವಂದಿಸಿದರು. ನವ್ಯಾ ಮತ್ತು ಶಿಫಾಲಿ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾಲಯದಲ್ಲಿ ಏಳು ದಿನಗಳ ರಾಷ್ಟ್ರೀಯ ಭಾವೈಕ್ಯ ಶಿಬಿರ ಆರಂಭವಾಗಿದ್ದು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಗುಜರಾತ್ ರಾಜ್ಯಗಳ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದಾರೆ. </p>.<p>ರಾಜ್ಯ ಎನ್.ಎಸ್.ಎಸ್. ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರ ಮತ್ತು ಎನ್.ಎಸ್.ಎಸ್. ಘಟಕದಲ್ಲಿ ಶುಕ್ರವಾರದಿಂದ ಪ್ರಾರಂಭವಾಗಿರುವ ಶಿಬಿರಕ್ಕೆ ವಿಧಾನ ಸಭೆ ಅಧ್ಯಕ್ಷ ಯು.ಟಿ. ಖಾದರ್ ಚಾಲನೆ ನೀಡಿದರು. </p>.<p>ದೇಶದ ಏಕತೆ ಮತ್ತು ಯುವ ಸಬಲೀಕರಣಕ್ಕೆ ರಾಷ್ಟ್ರೀಯ ಭಾವೈಕ್ಯ ಶಿಬಿರ ನೀಡುವ ಕೊಡುಗೆ ಮಹತ್ವದ್ದು. ಯುವಜನರಲ್ಲಿ ಆತ್ಮವಿಶ್ವಾಸ ಬೆಳೆಸುವ, ಬದುಕು ರೂಪಿಸಲು ಸಹಕಾರಿಯಾಗಿರುವ ಎನ್.ಎಸ್.ಎಸ್.ನ ಆದರ್ಶ ಶ್ಲಾಘನೀಯ ಎಂದು ಖಾದರ್ ಹೇಳಿದರು.</p>.<p>ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಎನ್.ಎಸ್.ಎಸ್. ಅಧಿಕಾರಿ ಪ್ರತಾಪ್ ಲಿಂಗಯ್ಯ, ಪ್ರಾದೇಶಿಕ ನಿರ್ದೇಶಕ ಕಾರ್ತಿಗೆನ್, ಲೆಫ್ಟಿನೆಂಟ್ ಕರ್ನಲ್ ಗ್ರೇಸಿಯಸ್ ಸಿಕ್ವೇರಾ ಶುಭ ಹಾರೈಸಿದರು.</p>.<p>ಕಾರ್ಯಕ್ರಮಕ್ಕೆ ಮುನ್ನ ಕುತ್ತಾರು ತನಕ ನಡೆದ ಮೆರವಣಿಗೆಗೆ ಕುಲಸಚಿವ ಗಂಗಾಧರ ಸೋಮಯಾಜಿ ಚಾಲನೆ ನೀಡಿದರು. </p><p>ಎನ್.ಎಸ್.ಎಸ್ ಘಟಕ ಸಂಯೋಜಕಿ ಡಾ. ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಅವರಿಲ್ ರೆಬೊಲ್ಲೊ ವಂದಿಸಿದರು. ನವ್ಯಾ ಮತ್ತು ಶಿಫಾಲಿ ಅಭಿಲಾಷ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>