ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಡಾ. ವಿನಯ್ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಬದನಾಜೆ ಶಂಕರ್ ಭಟ್ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ನಾಟಿಪದ್ಧತಿಯ ಕುರಿತು ಸತ್ಯನಾರಾಯಣ ಭಟ್ ರಚಿಸಿರುವ ‘ಮಾಳ ಸುತ್ತಿನ ಮೂಲಿಕಾ ವೈದ್ಯ' ಎಂಬ ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯಿತು. ಕಾಲೇಜಿನ ಟ್ರಸ್ಟಿ ಡಾ. ಹಾನ ಶೆಟ್ಟಿ ಉಪಸ್ಥಿತರಿದ್ದರು. ಆಳ್ವಾಸ್ ಟ್ರೆಡಿಷನಲ್ ಮೆಡಿಸಿನಲ್ ಆರ್ಕೈವ್ನ ನಿರ್ದೇಶಕ ಡಾ. ಸುಬ್ರಮಣ್ಯ ಪದ್ಯಾಣ ಪ್ರಾಸ್ತವಿಕ ಮಾತುಗಳನ್ನಾಡಿದರು. ಪ್ರಾಂಶುಪಾಲೆ ಡಾ. ಝನಿಕಾಡಿಸೋಜ, ಡಾ. ಕೃಷ್ಣಮೂರ್ತಿ , ಡಾ. ಗೀತಾ.ಬಿ. ಮಾರ್ಕಾಂಡೆ ಇದ್ದರು.