<p><strong>ಬಂಟ್ವಾಳ:</strong> ದೇಶದಲ್ಲಿ ಜಾತೀಯತೆಗೆ ಬದಲಾಗಿ ರಾಷ್ಟ್ರೀಯತೆ ಮೇಳೈಸಿದಾದ ಭಾರತ ವಿಶ್ವಗುರು ಆಗಲು ಸಾಧ್ಯವಿದೆ ಎಂದು ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ ಹೇಳಿದರು.</p>.<p>ಇಲ್ಲಿನ ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ನಾರಾಯಣ ಗುರುಗಳ ಜನ್ಮದಿನಾಚರಣೆ, ಗುರು ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಬಂಟ್ವಾಳ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.</p>.<p>ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಸದಾನಂದ ಪೂಜಾರಿ, ಉದ್ಯಮಿ ಸದಾನಂದ ಪೂಜಾರಿ ಪುಣೆ ಅವರಿಗೆ ಸಾಧನಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಸ್ಥಳದಾನಿ ಸುರೇಶ್ ಅಂಚನ್ ಅವರಿಗೆ ಸನ್ಮಾನ, ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಕ್ಷರ ಪುರಸ್ಕಾರ ಮತ್ತು ಅನಾರೋಗ್ಯ ಪೀಡಿತರಿಗೆ ಆರೋಗ್ಯ ನಿಧಿ ವಿತರಿಸಲಾಯಿತು.</p>.<p>ಪುರೋಹಿತ ಸೀತಾರಾಮ ಶಾಂತಿ, ಸಂಘದ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಳಕೆ, ನಿತ್ಯಾನಂದ ಪೂಜಾರಿ ಕೆಂತಲೆ, ಸಂಘದ ಪದಾಧಿಕಾರಿಗಳಾದ ಯೋಗೀಶ್ ಪೂಜಾರಿ ಕೇರ್ನಡೆ, ಸಂತೋಷ್ ಪೂಜಾರಿ ಬೆಟ್ಟುಕೋಡಿ, ರಮೇಶ್ ಪೂಜಾರಿ ಮಜಲು ಭಾಗವಹಿಸಿದ್ದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ರತ್ನಾಕರ ಪೂಜಾರಿ ಮದಂಗೋಡಿ ಸ್ವಾಗತಿಸಿ, ಮಹಿಳಾ ಸಮಿತಿ ಅಧ್ಯಕ್ಷೆ ಅನುರಾಧ ಜಾನುಗುರಿ ವಂದಿಸಿದರು. ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ:</strong> ದೇಶದಲ್ಲಿ ಜಾತೀಯತೆಗೆ ಬದಲಾಗಿ ರಾಷ್ಟ್ರೀಯತೆ ಮೇಳೈಸಿದಾದ ಭಾರತ ವಿಶ್ವಗುರು ಆಗಲು ಸಾಧ್ಯವಿದೆ ಎಂದು ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ ಹೇಳಿದರು.</p>.<p>ಇಲ್ಲಿನ ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ವತಿಯಿಂದ ಭಾನುವಾರ ನಡೆದ ನಾರಾಯಣ ಗುರುಗಳ ಜನ್ಮದಿನಾಚರಣೆ, ಗುರು ಪೂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಬಂಟ್ವಾಳ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿದರು.</p>.<p>ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಸದಾನಂದ ಪೂಜಾರಿ, ಉದ್ಯಮಿ ಸದಾನಂದ ಪೂಜಾರಿ ಪುಣೆ ಅವರಿಗೆ ಸಾಧನಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಸ್ಥಳದಾನಿ ಸುರೇಶ್ ಅಂಚನ್ ಅವರಿಗೆ ಸನ್ಮಾನ, ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಕ್ಷರ ಪುರಸ್ಕಾರ ಮತ್ತು ಅನಾರೋಗ್ಯ ಪೀಡಿತರಿಗೆ ಆರೋಗ್ಯ ನಿಧಿ ವಿತರಿಸಲಾಯಿತು.</p>.<p>ಪುರೋಹಿತ ಸೀತಾರಾಮ ಶಾಂತಿ, ಸಂಘದ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಳಕೆ, ನಿತ್ಯಾನಂದ ಪೂಜಾರಿ ಕೆಂತಲೆ, ಸಂಘದ ಪದಾಧಿಕಾರಿಗಳಾದ ಯೋಗೀಶ್ ಪೂಜಾರಿ ಕೇರ್ನಡೆ, ಸಂತೋಷ್ ಪೂಜಾರಿ ಬೆಟ್ಟುಕೋಡಿ, ರಮೇಶ್ ಪೂಜಾರಿ ಮಜಲು ಭಾಗವಹಿಸಿದ್ದರು.</p>.<p>ಸಂಘದ ಪ್ರಧಾನ ಕಾರ್ಯದರ್ಶಿ ರತ್ನಾಕರ ಪೂಜಾರಿ ಮದಂಗೋಡಿ ಸ್ವಾಗತಿಸಿ, ಮಹಿಳಾ ಸಮಿತಿ ಅಧ್ಯಕ್ಷೆ ಅನುರಾಧ ಜಾನುಗುರಿ ವಂದಿಸಿದರು. ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>