ತುರ್ತು ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಫ್) ಜೂನ್ 1ರಂದು ಜಿಲ್ಲೆಗೆ ಬರಲಿದ್ದು, ಒಂದು ತಂಡ ಮಂಗಳೂರು ಮತ್ತು ಇನ್ನೊಂದು ಪುತ್ತೂರಿನಲ್ಲಿ ಇರಲಿದೆ. ಪ್ರಾಕೃತಿಕ ವಿಕೋಪ ಎದುರಾದಲ್ಲಿ ತಕ್ಷಣ ಸ್ಪಂದಿಸುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ವಿಪತ್ತು ನಿರ್ವಹಣಾ ಯೋಜನೆ ರೂಪಿಸಲಾಗಿದೆ. ಮಂಗಳೂರು ನಗರದಲ್ಲಿ ಪ್ರತಿ ವಾರ್ಡ್ಗೆ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಒಟ್ಟು 291 ಇನ್ಸಿಡೆಂಟ್ ಕಮಾಂಡರ್ಗಳನ್ನು ನಿಯೋಜಿಸಲಾಗಿದೆ. ಯಾವುದೇ ಸಮಸ್ಯೆ ಎದುರಾದಲ್ಲಿ ತಕ್ಷಣ ಧಾವಿಸಲು ಸೂಚಿಸಲಾಗಿದೆ ಎಂದು ಹೇಳಿದರು.