<p>ಕಾಸರಗೋಡು: ರಾಜ್ಯ ಸರ್ಕಾರದ ನೇತೃತ್ವದಲ್ಲಿ ನವಕೇರಳ ವೇದಿಕೆ ಹೆಸರಿನಲ್ಲಿ ಸಮಗ್ರ ಅಭಿವೃದ್ಧಿಯ ಘೋಷಣೆಯೊಂದಿಗೆ ನಡೆಯುವ ರಾಜ್ಯ ಮಟ್ಟದ ಸರಣಿ ನ.18ರಂದು ಜಿಲ್ಲೆಯಲ್ಲಿ ಆರಂಭಗೊಳ್ಳಲಿದೆ. ಸಚಿವ ಸಂಪುಟದ ಜತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2 ದಿನ ಜಿಲ್ಲೆಯಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.</p>.<p>ಶನಿವಾರ ಮಧ್ಯಾಹ್ನ 3.30ಕ್ಕೆ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನವಕೇರಳ ವೇದಿಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.</p>.<p>ನ.19ರಂದು ಬೆಳಿಗ್ಗೆ 9 ಗಂಟೆಗೆ ಪಿಲಿಕುಂಜೆ ನಗರಸಭೆ ಸಭಾಂಗಣದಲ್ಲಿ ಪ್ರಭಾತ ಸಭೆ ನಡೆಯಲಿದೆ. 11 ಗಂಟೆಗೆ ನಾಯನ್ಮಾರು ಮೂಲೆಯ ಚೆಂಗಳ ಪಂಚಾಯಿತಿ ಕಿರು ಕ್ರೀಡಾಂಗಣದಲ್ಲಿ ಕಾಸರಗೋಡು ವಿಧಾನಸಭೆ ಕ್ಷೇತ್ರ ಮಟ್ಟದ ನವಕೇರಳ ವೇದಿಕೆ ಕಾರ್ಯಕ್ರಮ ನಡೆಯಲಿದೆ.</p>.<p>ಮಧ್ಯಾಹ್ನ 3 ಗಂಟೆಗೆ ಉದುಮಾ ವಿಧಾನಸಭೆ ಕ್ಷೇತ್ರದ ನವಕೇರಳ ವೇದಿಕೆ ಕಾರ್ಯಕ್ರಮ ಚಟ್ಟಂಚಾಲ್ ಶಾಲಾ ಮೈದಾನದಲ್ಲಿ ನಡೆಯಲಿದೆ. ಸಂಜೆ 4.30ಕ್ಕೆ ಕಾಞಂಗಾಡು ವಿಧಾನಸಭೆ ಕ್ಷೇತ್ರ ಮಟ್ಟದ ಕಾರ್ಯಕ್ರಮ ದುರ್ಗಾ ಶಾಲೆ ಮೈದಾನದಲ್ಲಿ, 6.30ಕ್ಕೆ ತ್ರಿಕರಿಪುರ ವಿಧಾನಸಭೆ ಕ್ಷೇತ್ರ ಮಟ್ಟದ ಕಾರ್ಯಕ್ರಮ ಕಾಲಿಕಡವಿನಲ್ಲಿ ನಡೆಯಲಿದೆ.</p>.<p>ಜಿಲ್ಲೆಯ ಉಸ್ತುವಾರಿ ಹೊಂದಿರುವ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ಶುಕ್ರವಾರ ಸಿದ್ಧತೆ ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇನ್ಬಶೇಖರನ್ ಇದ್ದರು.</p>.<p>ಭಾನುವಾರ ಕರ್ತವ್ಯದ ದಿನ: ರಾಜ್ಯ ಸರಕಾರದ ನೇತೃತ್ವದಲ್ಲಿ ನಡೆಯಲಿರುವ ನವಕೇರಳ ವೇದಿಕೆಯ ಆರಂಭ ಜಿಲ್ಲೆಯಲ್ಲಿ ನಡೆಯಲಿರುವುದರಿಂದ ಭಾನುವಾರ (ನ.19) ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯದ ದಿನವಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.</p>.<p>ಐಕ್ಯರಂಗ ಪ್ರತಿನಿಧಿಗಳು ಹಾಜರಾಗಲ್ಲ: ವಿರೋಧ ಪಕ್ಷವಾಗಿರುವ ಐಕ್ಯರಂಗದ ಪ್ರತಿನಿಧಿಗಳು ನವಕೇರಳ ಸರಣಿ ಕಾರ್ಯಕ್ರಮದಲ್ಲಿ ಹಾಜರಾಗುವುದಿಲ್ಲ. ಒಕ್ಕೂಟ್ ರಾಜ್ಯ ಸಮಿತಿ ಆದೇಶ ಪ್ರಕಾರ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಸರಗೋಡು: ರಾಜ್ಯ ಸರ್ಕಾರದ ನೇತೃತ್ವದಲ್ಲಿ ನವಕೇರಳ ವೇದಿಕೆ ಹೆಸರಿನಲ್ಲಿ ಸಮಗ್ರ ಅಭಿವೃದ್ಧಿಯ ಘೋಷಣೆಯೊಂದಿಗೆ ನಡೆಯುವ ರಾಜ್ಯ ಮಟ್ಟದ ಸರಣಿ ನ.18ರಂದು ಜಿಲ್ಲೆಯಲ್ಲಿ ಆರಂಭಗೊಳ್ಳಲಿದೆ. ಸಚಿವ ಸಂಪುಟದ ಜತೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2 ದಿನ ಜಿಲ್ಲೆಯಲ್ಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.</p>.<p>ಶನಿವಾರ ಮಧ್ಯಾಹ್ನ 3.30ಕ್ಕೆ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಪೈವಳಿಕೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನವಕೇರಳ ವೇದಿಕೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.</p>.<p>ನ.19ರಂದು ಬೆಳಿಗ್ಗೆ 9 ಗಂಟೆಗೆ ಪಿಲಿಕುಂಜೆ ನಗರಸಭೆ ಸಭಾಂಗಣದಲ್ಲಿ ಪ್ರಭಾತ ಸಭೆ ನಡೆಯಲಿದೆ. 11 ಗಂಟೆಗೆ ನಾಯನ್ಮಾರು ಮೂಲೆಯ ಚೆಂಗಳ ಪಂಚಾಯಿತಿ ಕಿರು ಕ್ರೀಡಾಂಗಣದಲ್ಲಿ ಕಾಸರಗೋಡು ವಿಧಾನಸಭೆ ಕ್ಷೇತ್ರ ಮಟ್ಟದ ನವಕೇರಳ ವೇದಿಕೆ ಕಾರ್ಯಕ್ರಮ ನಡೆಯಲಿದೆ.</p>.<p>ಮಧ್ಯಾಹ್ನ 3 ಗಂಟೆಗೆ ಉದುಮಾ ವಿಧಾನಸಭೆ ಕ್ಷೇತ್ರದ ನವಕೇರಳ ವೇದಿಕೆ ಕಾರ್ಯಕ್ರಮ ಚಟ್ಟಂಚಾಲ್ ಶಾಲಾ ಮೈದಾನದಲ್ಲಿ ನಡೆಯಲಿದೆ. ಸಂಜೆ 4.30ಕ್ಕೆ ಕಾಞಂಗಾಡು ವಿಧಾನಸಭೆ ಕ್ಷೇತ್ರ ಮಟ್ಟದ ಕಾರ್ಯಕ್ರಮ ದುರ್ಗಾ ಶಾಲೆ ಮೈದಾನದಲ್ಲಿ, 6.30ಕ್ಕೆ ತ್ರಿಕರಿಪುರ ವಿಧಾನಸಭೆ ಕ್ಷೇತ್ರ ಮಟ್ಟದ ಕಾರ್ಯಕ್ರಮ ಕಾಲಿಕಡವಿನಲ್ಲಿ ನಡೆಯಲಿದೆ.</p>.<p>ಜಿಲ್ಲೆಯ ಉಸ್ತುವಾರಿ ಹೊಂದಿರುವ ಬಂದರು ಸಚಿವ ಅಹಮ್ಮದ್ ದೇವರ್ ಕೋವಿಲ್ ಶುಕ್ರವಾರ ಸಿದ್ಧತೆ ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಜಿಲ್ಲಾಧಿಕಾರಿ ಕೆ.ಇನ್ಬಶೇಖರನ್ ಇದ್ದರು.</p>.<p>ಭಾನುವಾರ ಕರ್ತವ್ಯದ ದಿನ: ರಾಜ್ಯ ಸರಕಾರದ ನೇತೃತ್ವದಲ್ಲಿ ನಡೆಯಲಿರುವ ನವಕೇರಳ ವೇದಿಕೆಯ ಆರಂಭ ಜಿಲ್ಲೆಯಲ್ಲಿ ನಡೆಯಲಿರುವುದರಿಂದ ಭಾನುವಾರ (ನ.19) ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯದ ದಿನವಾಗಿದೆ ಎಂದು ಸರ್ಕಾರದ ಆದೇಶ ತಿಳಿಸಿದೆ.</p>.<p>ಐಕ್ಯರಂಗ ಪ್ರತಿನಿಧಿಗಳು ಹಾಜರಾಗಲ್ಲ: ವಿರೋಧ ಪಕ್ಷವಾಗಿರುವ ಐಕ್ಯರಂಗದ ಪ್ರತಿನಿಧಿಗಳು ನವಕೇರಳ ಸರಣಿ ಕಾರ್ಯಕ್ರಮದಲ್ಲಿ ಹಾಜರಾಗುವುದಿಲ್ಲ. ಒಕ್ಕೂಟ್ ರಾಜ್ಯ ಸಮಿತಿ ಆದೇಶ ಪ್ರಕಾರ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>