<p><strong>ಮಂಗಳೂರು</strong>: ‘ಬಿಹಾರ ಚುನಾವಣೆಯಲ್ಲಿ ಬೇರೆ ಬೇರೆ ಆಮಿಷಗಳ ಮೂಲಕ ಜನರ ದಾರಿ ತಪ್ಪಿಸಿದ್ದರಿಂದ ಎನ್ಡಿಎಗೆ ಯಶಸ್ಸು ಸಿಕ್ಕಿದೆ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಹಾರ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಆ ರಾಜ್ಯದ ಮಹಿಳೆಯರ ಖಾತೆಗೆ ತಲಾ ₹ 10 ಸಾವಿರ ಹಣ ಹಾಕಿ, ಮತ ಕೇಳಿದರೂ ಕೇಂದ್ರ ಚುನಾವಣೆ ಆಯೋಗ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇಂತಹ ವಿಚಾರದಲ್ಲೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ಎಲ್ಲ ಸರ್ಕಾರಗಳು ಇದೇ ಮಾದರಿಯನ್ನು ಅನುಸರಿಸಲಿವೆ’ ಎಂದು ಕಳವಳ ವ್ಯಕ್ತಪಡಿಸಿದರು. </p>.<p>‘ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಜನರಿಗೆ ಆಶ್ವಾಸನೆ ನೀಡಿದ್ದರೆ, ಎನ್ಡಿಎ ಸರ್ಕಾರದ ದುಡ್ಡನ್ನು ಚುನಾವಣೆಗೆ ಬಳಸಿ ಆಮಿಷ ಒಡ್ಡಿತ್ತು. ಬಿಹಾರದ ಜಿಡಿಪಿಯ ಶೇ 2.7ರಷ್ಟು ಹಣವನ್ನು ಜನರಿಗೆ ಹಂಚಿತ್ತು’ ಎಂದರು. </p>.<p>‘ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಚುನಾವಣೆಗಳಿಗೆ ವ್ಯತ್ಯಾಸವಿದೆ. ಅಲ್ಲಿ ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ಮತ ವಿಭಜನೆ ಮಾಡುತ್ತಾರೆ. ಈ ತಂತ್ರವು ದಕ್ಷಿಣ ಭಾರತದಲ್ಲಿ ನಡೆಯದು. ಕರ್ನಾಟಕದಲ್ಲಿ ಬಿಜೆಪಿಗೆ ಈ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ಗೆಲ್ಲಲು ಇದುವರೆಗೆ ಸಾಧ್ಯವಾಗಿಲ್ಲ. ಬಿಜೆಪಿ ಇಲ್ಲಿ ಯಾವತ್ತೂ ಗೆದ್ದಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ‘ಬಿಹಾರ ಚುನಾವಣೆಯಲ್ಲಿ ಬೇರೆ ಬೇರೆ ಆಮಿಷಗಳ ಮೂಲಕ ಜನರ ದಾರಿ ತಪ್ಪಿಸಿದ್ದರಿಂದ ಎನ್ಡಿಎಗೆ ಯಶಸ್ಸು ಸಿಕ್ಕಿದೆ’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p>.<p>ಇಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಹಾರ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಆ ರಾಜ್ಯದ ಮಹಿಳೆಯರ ಖಾತೆಗೆ ತಲಾ ₹ 10 ಸಾವಿರ ಹಣ ಹಾಕಿ, ಮತ ಕೇಳಿದರೂ ಕೇಂದ್ರ ಚುನಾವಣೆ ಆಯೋಗ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇಂತಹ ವಿಚಾರದಲ್ಲೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳದಿದ್ದರೆ ಭವಿಷ್ಯದಲ್ಲಿ ಎಲ್ಲ ಸರ್ಕಾರಗಳು ಇದೇ ಮಾದರಿಯನ್ನು ಅನುಸರಿಸಲಿವೆ’ ಎಂದು ಕಳವಳ ವ್ಯಕ್ತಪಡಿಸಿದರು. </p>.<p>‘ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಜನರಿಗೆ ಆಶ್ವಾಸನೆ ನೀಡಿದ್ದರೆ, ಎನ್ಡಿಎ ಸರ್ಕಾರದ ದುಡ್ಡನ್ನು ಚುನಾವಣೆಗೆ ಬಳಸಿ ಆಮಿಷ ಒಡ್ಡಿತ್ತು. ಬಿಹಾರದ ಜಿಡಿಪಿಯ ಶೇ 2.7ರಷ್ಟು ಹಣವನ್ನು ಜನರಿಗೆ ಹಂಚಿತ್ತು’ ಎಂದರು. </p>.<p>‘ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಚುನಾವಣೆಗಳಿಗೆ ವ್ಯತ್ಯಾಸವಿದೆ. ಅಲ್ಲಿ ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ಮತ ವಿಭಜನೆ ಮಾಡುತ್ತಾರೆ. ಈ ತಂತ್ರವು ದಕ್ಷಿಣ ಭಾರತದಲ್ಲಿ ನಡೆಯದು. ಕರ್ನಾಟಕದಲ್ಲಿ ಬಿಜೆಪಿಗೆ ಈ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣೆ ಗೆಲ್ಲಲು ಇದುವರೆಗೆ ಸಾಧ್ಯವಾಗಿಲ್ಲ. ಬಿಜೆಪಿ ಇಲ್ಲಿ ಯಾವತ್ತೂ ಗೆದ್ದಿಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>